ADVERTISEMENT

ಗೋಣಿಕೊಪ್ಪಲು: ಕಾಫಿ ತೋಟದಲ್ಲಿ ಹುಲಿ ಸುಳಿವು

​ಪ್ರಜಾವಾಣಿ ವಾರ್ತೆ
Published 6 ಜೂನ್ 2024, 13:34 IST
Last Updated 6 ಜೂನ್ 2024, 13:34 IST
<div class="paragraphs"><p>&nbsp;ಪ್ರಾತಿನಿಧಿಕ ಚಿತ್ರ</p></div>

 ಪ್ರಾತಿನಿಧಿಕ ಚಿತ್ರ

   

ಗೋಣಿಕೊಪ್ಪಲು: ಮಾಯಮುಡಿ ಸಮೀಪದ ಕಾಫಿತೋಟದ ನಡುವಿನ ರಸ್ತೆಯಲ್ಲಿ ಗುರುವಾರ ಮಧ್ಯಾಹ್ನ ಹುಲಿ ಕಾಣಿಸಿಕೊಂಡು ಸಾರ್ವಜನಿಕರಿಗೆ ಆತಂಕ ಮೂಡಿಸಿದೆ.

ಬಾಳಾಜಿಯ ಪುಚ್ಚಿಮಾಡ ಶರಣು ಎಂಬುವರ ಕಾಫಿ ತೋಟದಲ್ಲಿ ಸುಳಿದಾಡುವುದನ್ನು ನೋಡಿದ ಸ್ಥಳೀಯರು ತಿತಿಮತಿ ವಲಯ ಅರಣ್ಯಾಧಿಕಾರಿಗೆ ಮಾಹಿತಿ ನೀಡಿದರು. ಇದೀಗ ಹುಲಿ ಪತ್ತೆಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದಾರೆ.

ADVERTISEMENT

ಈ ಸ್ಥಳದ ಮತ್ತೂರು ಬಳಿಯಲ್ಲಿ 2 ದಿನಗಳ ಹಿಂದೆ ಮೇಕೆಯನ್ನು ಹುಲಿ ಕೊಂದು ಹಾಕಿತ್ತು. ಇದರಿಂದ ಹುಲಿ ಓಡಾಟ ಹೆಚ್ಚಾಗಿದ್ದು ಹುಲಿ ಸೆರೆ ಹಿಡಿದು ಸ್ಥಳೀಯರ ಆತಂಕ ದೂರ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.