ADVERTISEMENT

ಮುಳಬಾಗಿಲು: ರಸ್ತೆ ಅಪಘಾತ; ವಿದ್ಯಾರ್ಥಿ ಸ್ಥಳದಲ್ಲೇ ಸಾವು

​ಪ್ರಜಾವಾಣಿ ವಾರ್ತೆ
Published 30 ಮೇ 2024, 14:35 IST
Last Updated 30 ಮೇ 2024, 14:35 IST
<div class="paragraphs"><p>ಸಾವು </p></div>

ಸಾವು

   

ಪ್ರಾತಿನಿಧಿಕ ಚಿತ್ರ

ಮುಳಬಾಗಿಲು: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 75 ರ ದೇವರಾಯ ಸಮುದ್ರ ವೃತ್ತದಲ್ಲಿ ಗುರುವಾರ ನಡೆದ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ. 

ADVERTISEMENT

ಮುಳಬಾಗಿಲು ತಾಲ್ಲೂಕಿನ ಮಂಡಿಕಲ್ ಗ್ರಾಮದ ದಿನೇಶ್ ( 20) ಮೃತ ವಿದ್ಯಾರ್ಥಿ. ತಾಲ್ಲೂಕಿನ ಮುಷ್ಟೂರು ಗ್ರಾಮದ ವಾಸಿಯಾದ ದಿನೇಶ್ ಮಂಡಿಕಲ್ ಗ್ರಾಮದಲ್ಲಿ ತನ್ನ ಅಜ್ಜಿಯ ಮನೆಯಲ್ಲಿ ಇದ್ದುಕೊಂಡು ಪ್ರತಿದಿನ ದೇವರಾಯ ಸಮುದ್ರದ ಸರ್ಕಾರಿ ಐಟಿಐ ಕಾಲೇಜಿಗೆ ಹೋಗಿ ಬರುತ್ತಿದ್ದ. ದ್ವಿತೀಯ ವರ್ಷದ ಐಟಿಐ ವ್ಯಾಸಂಗ ಮಾಡುತ್ತಿದ್ದ.

ಎಂದಿನಂತೆ ಗ್ರಾಮದಿಂದ ದೇವರಾಯ ಸಮುದ್ರದ ಕಾಲೇಜಿಗೆ ಹೋಗಲು ತನ್ನ ಇತರೆ ಗೆಳೆಯರ ದ್ವಿಚಕ್ರ ವಾಹನದಲ್ಲಿ ಕುಳಿತು ರಾಷ್ಟ್ರೀಯ ಹೆದ್ದಾರಿ 75 ರ ದೇವರಾಯ ಸಮುದ್ರ ವೃತ್ತದಲ್ಲಿ ಹೋಗುತ್ತಿದ್ದಾಗ ಮತ್ತೊಂದು ದ್ವಿಚಕ್ರ ವಾಹನ ಗುದ್ದಿದೆ. ಆಗ ದಿನೇಶ್ ವಾಹನ ಸಮೇತ ಕೆಳಗೆ ಬಿದ್ದಿದ್ದಾನೆ. ಅದೇ ಹೆದ್ದಾರಿಯಲ್ಲಿ ಹಿಂಬದಿಯಲ್ಲಿ ವೇಗವಾಗಿ ಬರುತ್ತಿದ್ದ ಟಾಟಾ ಏಸ್ ವಾಹನ ಕೆಳಗೆ ಬಿದ್ದಿದ್ದ ದಿನೇಶ್ ಮೇಲೆ ಹರಿದ ಪರಿಣಾಮ, ಆತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಘಟನೆಯಲ್ಲಿ ಇಬ್ಬರುವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿದ್ದು ಕೋಲಾರ ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಡಿಕ್ಕಿ ಹೊಡೆದಿದ್ದ ದ್ವಿಚಕ್ರ ವಾಹನ ಸವಾರ ಪರಾರಿಯಾಗಿದ್ದಾನೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.