ಕೋಲಾರ: ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಕೊಡುವ ಕನ್ನಡ ಪರಿಚಾರಕ ಪ್ರಶಸ್ತಿಗೆ ಕನ್ನಡ ಹೋರಾಟಗಾರ ಕೋಲಾರದ ಕೆ.ರಾಜಕುಮಾರ್ ಮತ್ತು ನಿವೃತ್ತ ಮುಖ್ಯ ಶಿಕ್ಷಕ ಸುಲೇಮಾನ್ ಖಾನ್ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ₹5 ಸಾವಿರ ನಗದು ಮತ್ತು ಪಾರಿತೋಷಕ ಹೊಂದಿರುತ್ತದೆ. ಅ.30ರ ಬುಧವಾರ ಬೆಳಿಗ್ಗೆ 10.30ಕ್ಕೆ ನಗರದ ಪತ್ರಕರ್ತರ ಭವನದಲ್ಲಿ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್ ಮತ್ತು ಖಜಾಂಚಿ ಎ.ಜಿ.ಸುರೇಶ್ಕುಮಾರ್ ತಿಳಿಸಿದ್ದಾರೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎನ್.ಬಿ.ಗೋಪಾಲಗೌಡ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕೆಯುಡಬ್ಲ್ಯೂಜೆ ಖಜಾಂಚಿ ಎಂ.ವಾಸುದೇವಹೊಳ್ಳ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಕೆ.ಎಸ್.ಗಣೇಶ್, ವಿ.ಮುನಿರಾಜು ಭಾಗವಹಿಸುವರು ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.