ಮುಳಬಾಗಿಲು: ತಾಲ್ಲೂಕಿನ ಸಂಗಸಂದ್ರ ಗ್ರಾಮದ ಲಕ್ಷ್ಮಿ ನರಸಿಂಹ ಸ್ವಾಮಿ ದೇವಾಲಯದ ಬೀಗ ಮುರಿದು ಹುಂಡಿಯಲ್ಲಿದ್ದ ಹಣ ಮತ್ತು ಬಂಗಾರವನ್ನು ಶುಕ್ರವಾರ ರಾತ್ರಿ ಕಳ್ಳರು ಕಳ್ಳತನ ಮಾಡಿದ್ದಾರೆ.
ದೇವಾಲಯದ ಬೀಗ ಹೊಡೆದು ಕಳ್ಳರು ಒಳಗೆ ನುಗ್ಗಿ ಹುಂಡಿಯನ್ನು ಕಬ್ಬಿಣದ ಸಲಾಕೆಯಿಂದ ಹೊಡೆದು ಧ್ವಂಸಗೊಳಿಸಿ ಹುಂಡಿಯಲ್ಲಿದ್ದ ಸುಮಾರು ₹10 ರಿಂದ ₹15 ಸಾವಿರ ನಗದು ಹಾಗೂ ಐದು ಗ್ರಾಂ ಬಂಗಾರದ ತಾಳಿಯನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.
ರಾಜಸ್ವ ನಿರೀಕ್ಷಕ ಶ್ರೀನಿವಾಸ್, ಗ್ರಾಮ ಲೆಕ್ಕಾಧಿಕಾರಿ ಪ್ರಿಯಾಂಕಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.