ADVERTISEMENT

ರೈತ ಸಂಘದಿಂದ ನಿವೃತ್ತ ಯೋಧರಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 26 ಜುಲೈ 2024, 16:25 IST
Last Updated 26 ಜುಲೈ 2024, 16:25 IST
ಕೋಲಾರದಲ್ಲಿ ಕಾರ್ಗಿಲ್‌ ವಿಜಯೋತ್ಸವ ಅಂಗವಾಗಿ ರೈತ ಸಂಘದಿಂದ ನಿವೃತ್ತ ಯೋಧರನ್ನು ಸನ್ಮಾನಿಸಲಾಯಿತು
ಕೋಲಾರದಲ್ಲಿ ಕಾರ್ಗಿಲ್‌ ವಿಜಯೋತ್ಸವ ಅಂಗವಾಗಿ ರೈತ ಸಂಘದಿಂದ ನಿವೃತ್ತ ಯೋಧರನ್ನು ಸನ್ಮಾನಿಸಲಾಯಿತು   

ಕೋಲಾರ: 25ನೇ ಕಾರ್ಗಿಲ್‌ ವಿಜಯೋತ್ಸವ ಅಂಗವಾಗಿ ಶುಕ್ರವಾರ ರೈತ ಸಂಘದಿಂದ ಜಿಲ್ಲೆಯ ನಿವೃತ್ತ ಯೋಧರಿಗೆ ಹಸಿರು ಶಾಲು, ಗಿಡ ನೀಡಲಾಯಿತು.

ಯೋಧರ ಬೇಡಿಕೆಗಳನ್ನು ಸರ್ಕಾರಗಳು ಈಡೇರಿಸಬೇಕೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಒತ್ತಾಯಿಸಿದರು.

ಗ್ರಾಮ ಪಂಚಾಯಿತಿ ಸದಸ್ಯರಿಂದ ವಿಧಾನಸಭೆ, ಸಂಸತ್ ಸದಸ್ಯರು ಕಡ್ಡಾಯವಾಗಿ 5 ವರ್ಷ ಗಡಿಭಾಗದಲ್ಲಿ ದೇಶ ಸೇವೆ ಮಾಡುವ ಕಾನೂನು ಜಾರಿಯಾದರೆ ದೇಶದ ಭವಿಷ್ಯ ಉಜ್ವಲವಾಗುತ್ತದೆ ಎಂದರು.

ADVERTISEMENT

ರೈತ ಮುಖಂಡ ಮರಗಲ್ ಶ್ರೀನಿವಾಸ್, ನಿವೃತ್ತ ಯೋಧರಾದ ಮಂಜುನಾಥ, ವೆಂಕಟೇಶ್ ಮಾತನಾಡಿದರು. ನಿವೃತ್ತ ಯೋಧರು, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಮಂಜುನಾಥಗೌಡ, ಶಾಂತಕುಮಾರ್, ಕುಮಾರ್, ಸಿ.ಎನ್.ರಘು, ಶಿವರಾಜ್, ಶ್ರೀರಾಮ್, ಸುರೇಶ್, ದೇವರಾಜ್, ಪುತ್ತೇರಿರಾಜು, ಗಿರೀಶ್, ವಕ್ಕಲೇರಿ ಹನುಮಯ್ಯ ಭಾಗವಹಿಸಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.