ಶ್ರೀನಿವಾಸಪುರ: ತಾಲ್ಲೂಕಿನ ಚಿಂತಾಮಣಿ ರಸ್ತೆಯ ಕಲ್ಲೂರು ಗ್ರಾಮದ ಸಮೀಪ ಶುಕ್ರವಾರ ಸಂಜೆ ತಿರುಮಲದಿಂದ ಚಿಕ್ಕಬಳ್ಳಾಪುರ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದು ಸಾರಂಗ ಮೃತಪಟ್ಟಿದೆ.
ಸಾರಂಗವು ರಸ್ತೆ ದಾಟುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಅರಣ್ಯ ಅಧಿಕಾರಿ ಅನಿಲ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಕಾರು ಚಾಲಕನನ್ನು ವಿಚಾರಣೆಯ ಸಂಬಂದ ಶ್ರೀನಿವಾಸಪುರ ಅರಣ್ಯ ಇಲಾಖಾ ಕಚೇರಿಗೆ ಕರೆದೊಯ್ಯಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.