ADVERTISEMENT

ಕೋಲಾರ: ಅನಂತ ಕುಮಾರ್‌ ಹೆಗಡೆ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2024, 14:06 IST
Last Updated 14 ಮಾರ್ಚ್ 2024, 14:06 IST
ಅನಂತ ಕುಮಾರ್‌ ಹೆಗಡೆ 
ಅನಂತ ಕುಮಾರ್‌ ಹೆಗಡೆ    

ಕೋಲಾರ: ‘ಸಂವಿಧಾನ ಬದಲಿಸುವುದಾಗಿ ಹೇಳಿರುವ ಸಂಸದ ಅನಂತ ಕುಮಾರ್‌ ಹೆಗಡೆ ಮೇಲೆ ರಾಜ್ಯ ಸರ್ಕಾರ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ರಮೇಶ್ ಒತ್ತಾಯಿಸಿದ್ದಾರೆ

‘ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸೀಟು ಗೆಲ್ಲಬೇಕು. ರಾಜ್ಯಸಭೆಯಲ್ಲೂ ಬಹುಮತ ಸಿಕ್ಕಿದರೆ ಸಂವಿಧಾನ ಬದಲಾವಣೆ ಮಾಡಲು ಸಾಧ್ಯವಾಗುತ್ತದೆ ಎಂಬರ್ಥದಲ್ಲಿ ಅನಂತ ಕುಮಾರ್‌ ಹೆಗಡೆ ಹೇಳಿಕೆ ನೀಡಿದ್ದು, ಕಾನೂನುಬಾಹಿರವಾಗಿದೆ’ ಎಂದಿದ್ದಾರೆ.

‘ಪ್ರಜಾಪ್ರಭುತ್ವ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಜನತೆ ಬಿಜೆಪಿಯನ್ನು ಅಧಿಕಾರದಿಂದ ಹೊರಗೆ ದಬ್ಬಿದ್ದಾರೆ. ಇದೀಗ ಸಂವಿಧಾನ, ಪ್ರಜಾಪ್ರಭುತ್ವವನ್ನು ಉಳಿಸುವ ಜವಾಬ್ದಾರಿ ಹೊತ್ತಿರುವ ರಾಜ್ಯ ಸರ್ಕಾರ ಅನಂತ ಕುಮಾರ್ ಹೆಗಡೆ ಅವರಂತಹ ದೇಶದ್ರೋಹಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಗೃಹ ಸಚಿವ ಜಿ.ಪರಮೇಶ್ವರ ಗಟ್ಟಿಗುಂಡಿಗೆಯ ನಿರ್ಧಾರ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.