ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ವಿಚಾರ ಮತ್ತು ಪಕ್ಷ ಸಂಘಟನೆ ಬಗ್ಗೆ ಚರ್ಚಿಸುವ ಸಲುವಾಗಿ ಬುಧವಾರ ಬೆಳಿಗ್ಗೆ 10 ಗಂಟೆಗೆ ತಾಲ್ಲೂಕಿನ ಅಮ್ಮೇರಹಳ್ಳಿಯ ಸಿಎಂಆರ್ ಪದ್ಮಾ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಸಭೆ ಹಮ್ಮಿಕೊಂಡಿದ್ದು, ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ.
ಕೋಲಾರ ವಿಧಾನಸಭಾ ಕ್ಷೇತ್ರದ ಮುಖಂಡರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಚುನಾಯಿತ ಜನಪ್ರತಿನಿಧಿಗಳು, ಜಿಲ್ಲಾ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಹಾಲಿ ಮತ್ತು ಮಾಜಿ ಸದಸ್ಯರು, ಇತರೆ ಸಹಕಾರ ಸಂಘಗಳ ಜನಪ್ರತಿನಿಧಿಗಳು ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಪಾಲ್ಗೊಳ್ಳಬೇಕೆಂದು ಕೋಲಾರ ತಾಲ್ಲೂಕು ಜೆಡಿಎಸ್ ಪಕ್ಷದ ಅಧ್ಯಕ್ಷ ಬಾಬುಮೌನಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.