ಮುಳಬಾಗಿಲು: ರಾಷ್ಟ್ರೀಯ ಯುವ ಕಾಂಗ್ರೆಸ್ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ತಾಲ್ಲೂಕಿನ ಮಂಡಿಕಲ್ ಗ್ರಾಮದ ಎಂ.ಎಸ್.ಮಂಜುನಾಥಗೌಡ ಅವರನ್ನು ನೇಮಕ ಮಾಡಿ ಕೆಪಿಸಿಸಿ ಯುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಬಂಟಿ ಶಲ್ಕಿ ಆದೇಶ ಹೊರಡಿಸಿದ್ದಾರೆ.
ತಾಲ್ಲೂಕಿನಲ್ಲಿ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಪಕ್ಷದ ಉತ್ತಮ ಸಂಘಟನಾ ಕೆಲಸ ಗುರುತಿಸಿ ರಾಜ್ಯ ಮಟ್ಟದಲ್ಲಿ ಕೆಲಸ ಮಾಡಲು ಆದೇಶ ಹೊರಡಿಸಲಾಗಿದ್ದು ಜಿಲ್ಲಾ ಹಾಗೂ ತಾಲ್ಲೂಕು ಮುಖಂಡರು ಅಭಿನಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.