ಬಂಗಾರಪೇಟೆ: ಪಟ್ಟಣದಲ್ಲಿ ಕಳೆದ ಒಂದು ವಾರದಿಂದ ಐದಕ್ಕೂ ಹೆಚ್ಚು ಮನೆ ಕಳ್ಳತನವಾಗಿರುವ ಪ್ರಕರಣಗಳು ವರದಿಯಾಗಿದ್ದು, ಕಳ್ಳರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಪಟ್ಟಣದ ಶ್ರೀನಗರ ಬಡಾವಣೆಯಲ್ಲಿ ಗಸ್ತು ಮಾಡಿರುವ ಕಳ್ಳರ ಗ್ಯಾಂಗ್ ಮನೆ ಕಳ್ಳತನಕ್ಕೆ ಹೊಂಚು ಹಾಕಿವೆ. ಕಳ್ಳರು ಹೊರ ರಾಜ್ಯದಿಂದ ಬಂದಿರುವ ಸಾಧ್ಯತೆ ಇದ್ದು, ಕಳ್ಳತನದ ಪೂರ್ವ ಯೋಜನೆಯ ವಿಡಿಯೊಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ತಲೆಗೆ ಟೋಪಿ ಹಾಕಿಕೊಂಡು, ಮುಖಕ್ಕೆ ಗುರುತು ಸಿಗದಂತೆ ಬಟ್ಟೆ ಸುತ್ತಿಕೊಂಡು ಕಳ್ಳತನ ಮಾಡಿದ್ದಾರೆ. ಈ ಟೋಪಿ ಗ್ಯಾಂಗ್ ಕಡಿವಾಣಕ್ಕೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣ ನಡೆಯುತ್ತಿದ್ದು, ಕಳೆದೊಂದು ತಿಂಗಳಲ್ಲಿ ಪಿಎಸ್ಐ ಸೇರಿದಂತೆ 8 ಜನರನ್ನು ಅಮಾನತು ಮಾಡಿ ಎಸ್ಪಿ ಆದೇಶ ಹೊರಡಿಸಿದ್ದಾರೆ. ಜತೆಗೆ, ಟೋಪಿ ಗ್ಯಾಂಗ್ ಪತ್ತೆಗೆ ಈಗಾಗಲೇ ವಿಶೇಷ ತಂಡ ರಚನೆ ಮಾಡಿದ್ದು, ಈಗಾಗಲೇ ಕೆಜಿಎಫ್ ನಗರದಲ್ಲಿ ಚಡ್ಡಿ ಗ್ಯಾಂಗ್ ಅನ್ನು ಬಂಧಿಸಿರುವ ನಾವು ಅದಷ್ಟು ಬೇಗ ಈ ಟೋಪಿ ಗ್ಯಾಂಗ್ ಅನ್ನು ಪತ್ತೆ ಹಚ್ಚುತ್ತೇವೆ ಎಂದು ಕೆಜಿಎಫ್ ಎಸ್ಪಿ ಶಾಂತರಾಜು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.