ADVERTISEMENT

ಭತ್ತದ ಹುಲ್ಲಿನ ಬಣವೆ ಭಸ್ಮ

​ಪ್ರಜಾವಾಣಿ ವಾರ್ತೆ
Published 8 ಮೇ 2024, 16:40 IST
Last Updated 8 ಮೇ 2024, 16:40 IST
ಕಾರಟಗಿ ಸಮೀಪದ ಪನ್ನಾಪುರದಲ್ಲಿ ಹುಲ್ಲಿನ ಬಣಿವೆಗೆ ಬುಧವಾರ ಹತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಶ್ರಮಿಸಿದರು
ಕಾರಟಗಿ ಸಮೀಪದ ಪನ್ನಾಪುರದಲ್ಲಿ ಹುಲ್ಲಿನ ಬಣಿವೆಗೆ ಬುಧವಾರ ಹತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಶ್ರಮಿಸಿದರು   

ಪ್ರಜಾವಾಣಿ ವಾರ್ತೆ

ಕಾರಟಗಿ: ವಿದ್ಯುತ್‌ ತಂತಿಗಳ ಸ್ಪರ್ಷದಿಂದ ಕಿಡಿಗಳು ಉದುರಿ 5 ಎಕರೆಯ ಭತ್ತದ ಹುಲ್ಲಿನ ಬಣಿವೆ ಬಹುಪಾಲು ಭಸ್ಮವಾಗಿರುವ ಘಟನೆ ತಾಲ್ಲೂಕಿನ ಪನ್ನಾಪುರದಲ್ಲಿ ಬುಧವಾರ ಜರುಗಿದೆ.

ಪನ್ನಾಪುರದ ದುರ್ಗಪ್ಪ ಜಂಬಣ್ಣ ಎಂಬುವವರಿಗೆ ಸೇರಿದ ಹುಲ್ಲಿನ ಬಣಿವೆ ಇದಾಗಿದೆ.
ಹುಲ್ಲಿನ ಬಣಿವೆಯ ಮೇಲೆ ವಿದ್ಯುತ್‌ ತಂತಿಗಳು ಹಾದುಹೋಗಿದ್ದು, ಕಾಗೆಗಳು ತಂತಿಗಳ ಮೇಲೆ ಕುಳಿತಿದ್ದರಿಂದ ತಂತಿಗಳು ಪರಸ್ಪರ ಸ್ಪರ್ಶವಾಗಿ ವಿದ್ಯುತ್‌ ಕಿಡಿಗಳು ಉದುರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯರು ತಿಳಿಸಿದರು.

ADVERTISEMENT

ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸಲು ಶ್ರಮಿಸಿದರು. ಸ್ಥಳೀಯರು ಕೈಜೋಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.