ಮುನಿರಾಬಾದ್: ಇಲ್ಲಿನ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯ ಪಂಜಾಬಿ ದಾಬಾ ಬಳಿ ನಡೆದ ಕಾರು ಮತ್ತು ಬೈಕ್ ಮಧ್ಯದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವ ನೃತ್ಯ ಶಿಕ್ಷಕ (ಡಾನ್ಸ್ ಮಾಸ್ಟರ್) ಹೊಸಹಳ್ಳಿ ಗ್ರಾಮದ ಕೊಟ್ರೇಶ ಪರಸಪ್ಪ ಹಂಪಸಾಗರ(33) ಆಸ್ಪತ್ರೆಯಲ್ಲಿ ನಿಧನರಾದರು.
ಭಾನುವಾರ ರಾತ್ರಿ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಗಾಯಾಳು ಕೊಟ್ರೇಶ ಅವರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಈಚೆಗೆ ನಿಧನರಾದರು.
ಮುನಿರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.