ಕೊಪ್ಪಳ: ಅಶ್ಲೀಲ ವಿಡಿಯೊ ಪ್ರಕರಣದ ಆರೋಪಿಯಾದ ಸಂಸದ ಪ್ರಜ್ವಲ್ ರೇವಣ್ಣ ವರನ್ನು ವಿದೇಶದಿಂದ ಬಂಧಿಸಿ ಕರೆತಂದು ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಕೆಪಿಸಿಸಿ ಜಿಲ್ಲಾ ಮಾಧ್ಯಮ ವಕ್ತಾರ (ಎಸ್.ಸಿ. ಘಟಕ) ಪರಶುರಾಮ್ ಕೆರೆಹಳ್ಳಿ ಅಗ್ರಹಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು ‘ಎಸ್ಐಟಿಯಿಂದ ರೇವಣ್ಣ ಅವರಿಗೆ ನೋಟಿಸ್ ಕಳುಹಿಸಿದರೂ ಬಿಜೆಪಿ ಸರ್ಕಾರದ ವಿದೇಶಾಂಗ ಸಚಿವರು ಮತ್ತು ಪ್ರಧಾನಿ ನರೇಂದ್ರ ಮೋದಿ ಯಾವ ಕ್ರಮವೂ ಕೈಗೊಂಡಿಲ್ಲ. ಈ ಬಗ್ಗೆ ಅವರು ದೇಶದ ಜನರಿಗೆ ಉತ್ತರ ಕೊಡಬೇಕು’ ಎಂದಿದ್ದಾರೆ.
ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಅಂಗವಿಕಲರಿಗೆ ಮೀಸಲಾತಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.