ADVERTISEMENT

ಅನುಶ್ರೀ ಸಾವಿಗೆ ನ್ಯಾಯ ಕೊಡಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2024, 15:27 IST
Last Updated 27 ಏಪ್ರಿಲ್ 2024, 15:27 IST
ಬಾಲಕಿ ಅನುಶ್ರೀ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸಬೇಕು ಎಂದು ಕಿನ್ನಾಳದ ಗ್ರಾಮಸ್ಥರು ಹೆಚ್ಚುವರಿ ಎಸ್‌.ಪಿ. ಹೇಮಂತಕುಮಾರ್‌ ಅವರಿಗೆ ಮನವಿ ಸಲ್ಲಿಸಿದರು
ಬಾಲಕಿ ಅನುಶ್ರೀ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸಬೇಕು ಎಂದು ಕಿನ್ನಾಳದ ಗ್ರಾಮಸ್ಥರು ಹೆಚ್ಚುವರಿ ಎಸ್‌.ಪಿ. ಹೇಮಂತಕುಮಾರ್‌ ಅವರಿಗೆ ಮನವಿ ಸಲ್ಲಿಸಿದರು   

ಕೊಪ್ಪಳ: ತಾಲ್ಲೂಕಿನ ಕಿನ್ನಾಳ ಗ್ರಾಮದಲ್ಲಿ ಕಳೆದ ವಾರ ಕೊಲೆಗೀಡಾದ ಅನುಶ್ರೀ ಸಾವಿನ ಕುರಿತು ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷೆಗೆ ಒಳಪಡಿಸಬೇಕು ಎಂದು ಕಿನ್ನಾಳ ಗ್ರಾಮಸ್ಥರು ಆಗ್ರಹಿಸಿದ್ದು, ಈ ಕುರಿತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಬರೆದ ಪತ್ರವನ್ನು  ಹೆಚ್ಚುವರಿ ಎಸ್‌.ಪಿ. ಹೇಮಂತಕುಮಾರ್‌ ಅವರಿಗೆ ಸಲ್ಲಿಸಿದರು.

‘ಕರಕುಶಲತೆಯಲ್ಲಿ ದೇಶದಲ್ಲೆ ಹೆಸರು ಮಾಡಿರುವ ಕಿನ್ನಾಳ ಗ್ರಾಮದಲ್ಲಿ ಬಾಲಕಿ ಹತ್ಯೆಯಾಗಿರುವುದು ಗ್ರಾಮಸ್ಥರ ನಿದ್ದೆಗೆಡಿಸಿದೆ. ಗ್ರಾಮದ ಜನರ ಮಾನಸಿಕ ನೆಮ್ಮದಿಯೂ ಹಾಳಾಗಿದೆ. ಆದ್ದರಿಂದ ಆದಷ್ಟು ಬೇಗನೆ ತಪ್ಪಿತಸ್ಥರನ್ನು ಪತ್ತೆ ಹಚ್ಚಬೇಕು’ ಎಂದು ಆಗ್ರಹಿಸಿದ್ದಾರೆ.

ಕಿನ್ನಾಳ ಗ್ರಾಮಸ್ಥರಾದ ಬಾಷಾ ಹಿರೇಮನಿ, ಬಸವರಾಜ ಚಿಲವಾಡಗಿ ಅನಿಲ ಬೋರಟ್ಟಿ, ಮಂಜು ಉದ್ದಾರ, ಮಂಜುನಾಥ ಗೊಂಡಬಾಳ, ವೀರೇಶ ತಾವರಗೇರಿ ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.