ADVERTISEMENT

ಸಿಎಂ ಮೇಲೆ ಎಫ್‌ಐಆರ್‌ | ಬಿಜೆಪಿ ಕುತಂತ್ರ: ಸಚಿವ ಶಿವರಾಜ ತಂಗಡಗಿ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2024, 16:07 IST
Last Updated 29 ಸೆಪ್ಟೆಂಬರ್ 2024, 16:07 IST
ಕನಕಗಿರಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸಚಿವ ಶಿವರಾಜ ತಂಗಡಗಿ ಅಧ್ಯಕ್ಷತೆಯಲ್ಲಿ ಭಾನುವಾರ ಪಕ್ಷದ ಮುಖಂಡರು, ಕಾರ್ಯಕರ್ತರ ಸಭೆ ನಡೆಯಿತು
ಕನಕಗಿರಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸಚಿವ ಶಿವರಾಜ ತಂಗಡಗಿ ಅಧ್ಯಕ್ಷತೆಯಲ್ಲಿ ಭಾನುವಾರ ಪಕ್ಷದ ಮುಖಂಡರು, ಕಾರ್ಯಕರ್ತರ ಸಭೆ ನಡೆಯಿತು   

ಕನಕಗಿರಿ: ರಾಜಕೀಯ ಕುತಂತ್ರದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಎಫ್ಐಆರ್ ದಾಖಲು ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ದೂರಿದರು.

ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ನಡೆದ ಪಕ್ಷದ ಮುಖಂಡರ ಸಭೆಯ ನಂತರ ಪತ್ರಕರ್ತರ ಜತೆಗೆ ಮಾತನಾಡಿದರು.

‘ರಾಜ್ಯಪಾಲರ ಭವನ ಬಿಜೆಪಿ ಕಚೇರಿಯಾಗಿದೆ. ಸಿಎಂ ಮುಡಾ ವಿಚಾರ ಬಿಜೆಪಿ ಅಧಿಕಾರದಲ್ಲಿ ನಡೆದಿದ್ದು ಯಾವುದಕ್ಕೂ ಶಿಫಾರಸು, ಸಹಿ ಇಲ್ಲ. ಆದರೂ ಸಿದ್ದರಾಮಯ್ಯನವರ ವ್ಯಕ್ತಿತ್ವಕ್ಕೆ ಕಳಂಕ ತರುವ ಸಲುವಾಗಿ ಷಡ್ಯಂತ್ರ ಮಾಡಲಾಗಿದೆ’ ಎಂದರು.

ADVERTISEMENT

‘ಸಿದ್ದರಾಮಯ್ಯ ಅವರ ಜನಪ್ರಿಯತೆ ಸಹಿಸಿಕೊಳ್ಳಲು ಬಿಜೆಪಿ ಅವರಿಗೆ ಆಗುತ್ತಿಲ್ಲ, ಅವರನ್ನು ಕುಗ್ಗಿಸುವ ಯತ್ನ ಎಲ್ಲರಿಗೂ ಗೊತ್ತಾಗಿದೆ’ ಎಂದರು.

‘ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಸಿದ್ದರಾಮಯ್ಯವರ ಬಗ್ಗೆ ಮಾತನಾಡುವುದಕ್ಕೆ ಯಾವುದೇ ನೈತಿಕ ಹಕ್ಕು ಇಲ್ಲ. ಕುಮಾರಸ್ವಾಮಿ ಅವರ ಮೇಲೆ ಹಲವಾರು ಪ್ರಕರಣಗಳಿವೆ. ಕೇಂದ್ರ ಸರ್ಕಾರ ಸಿಬಿಐ, ಇಡಿಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.