ADVERTISEMENT

ಗಂಗಾವತಿ: ಅಂಗನವಾಡಿ ಕಟ್ಟಡದ ಚಾವಣಿ ಪದರು ಕಳಚಿ ನಾಲ್ವರು ಮಕ್ಕಳಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2024, 11:20 IST
Last Updated 23 ಸೆಪ್ಟೆಂಬರ್ 2024, 11:20 IST
   

ಗಂಗಾವತಿ (ಕೊಪ್ಪಳ): ಗಂಗಾವತಿಯ ಮೆಹಬೂಬ್ ನಗರದಲ್ಲಿರುವ ಅಂಗನವಾಡಿ ಕೇಂದ್ರದ ಕಟ್ಟಡದಲ್ಲಿನ ಚಾವಣಿಯ ಪದರು ಕಳಚಿಬಿದ್ದ ಪರಿಣಾಮ ನಾಲ್ಕು ಜನ ಮಕ್ಕಳಿಗೆ ಗಾಯಗಳಾಗಿವೆ.

ಗಾಯಗೊಂಡ ಮಕ್ಕಳನ್ನು ತಾಲ್ಲೂಕಿನ ಆಸ್ಪತ್ರೆಗೆ ಸೇರಿಸಲಾಗಿದೆ. ಘಟನೆ ನಡೆದಾಗ ಅಂಗನವಾಡಿಯಲ್ಲಿ 20ಕ್ಕೂ ಹೆಚ್ಚು ಮಕ್ಕಳು ಇದ್ದರು. ಮಕ್ಕಳಿಗೆ ತಲೆ ಮತ್ತು ಕಾಲಿನ ಭಾಗಕ್ಕೆ ಹೆಚ್ಚು ಪೆಟ್ಟಾಗಿದೆ ಎಂದು ಮೂಲಗಳು ತಿಳಿಸಿವೆ. ಪೊಲೀಸರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT