ADVERTISEMENT

ಗಂಗಾವತಿ | ಕಾಲು ಜಾರಿ ಕೆರೆಗೆ ಬಿದ್ದ ಇಸ್ರೇಲ್‌ ಪ್ರಜೆ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2024, 14:33 IST
Last Updated 23 ಅಕ್ಟೋಬರ್ 2024, 14:33 IST
   

ಗಂಗಾವತಿ: ತಾಲ್ಲೂಕಿನ ಸಾಣಾಪುರ ಗ್ರಾಮದ ಕೆರೆಯಲ್ಲಿ ಬುಧವಾರ ಈಜಲು ಹೋದಾಗ ಕಾಲು ಜಾರಿ ಬಿದ್ದ ಇಸ್ರೇಲ್‌ ಪ್ರಜೆಯನ್ನು ಸಹ ಪ್ರವಾಸಿಗರು ರಕ್ಷಿಸಿದ್ದಾರೆ.

ನೀರಿನಲ್ಲಿ ಸಾವಿನ ದವಡೆಗೆ ಸಿಲುಕಿ ಮುಳುಗುತ್ತಿದ್ದ ಇಸ್ರೇಲ್‌ನ ಲೇವಿಅಮಿಟ್ ತನ್ನ ಸ್ನೇಹಿತರ ಜೊತೆಗೆ ಹಂಪಿ ಹಾಗೂ ಆನೆಗೊಂದಿ ಭಾಗದಲ್ಲಿ ಪ್ರವಾಸಕ್ಕೆ ಬಂದಿದ್ದರು.

ಪ್ರವಾಸಿ ತಾಣದಲ್ಲಿ ಸುತ್ತಾಡಿದ ಬಳಿಕ ಆರಂಭದಲ್ಲಿ ಕೆರೆಯ ದಡದಲ್ಲಿ ಸ್ವಲ್ಪ ನೀರಿದ್ದ ಜಾಗದಲ್ಲಿ ಸ್ನಾನ ಮಾಡುತ್ತಿದ್ದಾಗ ಕಾಲು ಜಾರಿ ಕೆರೆಯ ಆಳಕ್ಕೆ ಹೋಗಿದ್ದಾರೆ. ನೀರಿನಲ್ಲಿ ಮುಳುಗಿ ಏಳುತ್ತಿರುವುದನ್ನು ಗಮನಿಸಿದ ಸಹ ಪ್ರವಾಸಿಗರು ರಕ್ಷಣೆ ಮಾಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.