ADVERTISEMENT

ಕೊಪ್ಪಳ; ಗಣಪತಿ ವಿಸರ್ಜನೆ ಮೆರವಣಿಗೆ ಮುಗಿಸಿ ವಾಪಸ್ ಹೋಗುವಾಗ ಅಪಘಾತ: ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2024, 7:31 IST
Last Updated 24 ಸೆಪ್ಟೆಂಬರ್ 2024, 7:31 IST
<div class="paragraphs"><p>ನವೀನ್ ಕುಮಾರ್</p></div>

ನವೀನ್ ಕುಮಾರ್

   

ಗಂಗಾವತಿ: ಗಣೇಶ ಮೂರ್ತಿ ವಿಸರ್ಜನೆ ಮಾಡಿ ಮನೆಗೆ ವಾಪಸ್ ಹೋಗುವಾಗ ತಾಲ್ಲೂಕಿನ ವಡ್ಡರಹಟ್ಟಿ ಕ್ಯಾಂಪ್ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ.

ಕೊಪ್ಪಳ ತಾಲ್ಲೂಕಿನ ಹುಲಿಗಿ ಸಮೀಪದ ಶಿವಪುರ ಗ್ರಾಮದ ನವೀನ್ ಕುಮಾರ್ (27) ಮೃತಪಟ್ಟವರು.

ADVERTISEMENT

ಗಂಗಾವತಿ ನಗರದ ಉಪ್ಪಾರ ಓಣಿಯ ಭಗೀರಥ ವೃತ್ತದಲ್ಲಿ ಪ್ರತಿಷ್ಠಾಪನೆ ಮಾಡಿದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸಿ ಯುವಕ ಬೈಕ್ ಮೇಲೆ ಹೋಗುವಾಗ ಎದುರಿಗೆ ಬಂದ ಟ್ಯಾಂಕರ್ ಗೆ ಡಿಕ್ಕಿ ಹೊಡೆದು ಈ ಅವಘಡ ಜರುಗಿದೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.