ADVERTISEMENT

ಕೊಪ್ಪಳ: ಡೆಂಗ್ಯೂ ಜ್ವರದ ಬಗ್ಗೆ ಮುಂಜಾಗ್ರತಾ ಕ್ರಮವಾಗಿ ಕೈಗೊಳ್ಳುವ ಬಗ್ಗೆ ಸಭೆ

​ಪ್ರಜಾವಾಣಿ ವಾರ್ತೆ
Published 11 ಜುಲೈ 2024, 13:48 IST
Last Updated 11 ಜುಲೈ 2024, 13:48 IST
ಡೆಂಗಿ ಜ್ವರದ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಪಿಡಿಒ ದೇವೇಂದ್ರಪ್ಪ ಮಾತನಾಡಿದರು
ಡೆಂಗಿ ಜ್ವರದ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಪಿಡಿಒ ದೇವೇಂದ್ರಪ್ಪ ಮಾತನಾಡಿದರು    

ಹನುಮಸಾಗರ: ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಡೆಂಗಿ ಜ್ವರದ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ವಿಶೇಷ ಸಭೆ ಜರುಗಿಸಲಾಯಿತು.

‘ಡೆಂಗಿ ಜ್ವರವು ಹೆಚ್ಚುತ್ತಿರುವ ಸಂದರ್ಭದಲ್ಲಿ, ಜನರ ಆರೋಗ್ಯವನ್ನು ರಕ್ಷಿಸಲು ಸಮರ್ಥ ಕ್ರಮಗಳನ್ನು ತೆಗೆದುಕೊಳ್ಳುವುದು ಮುಖ್ಯವಾಗಿದೆ’ ಎಂಬುದನ್ನು ಪ್ರಧಾನವಾಗಿ ಚರ್ಚಿಸಲಾಯಿತು.

ಸಭೆಯಲ್ಲಿ ಭಾಗವಹಿಸಿದ್ದವರು ಗ್ರಾಮ ಪಂಚಾಯಿತಿ ಪಿಡಿಒ, ಸದಸ್ಯರು, ವೈದ್ಯಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಆರೋಗ್ಯ ಅಧಿಕಾರಿಗಳು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು, ಮತ್ತು ಗ್ರಾಮ ಪಂಚಾಯತಿ ಸಿಬ್ಬಂದಿ ಭಾಗವಹಿಸಿದ್ದರು.

ADVERTISEMENT

ಸಭೆಯಲ್ಲಿ ಡೆಂಗಿ ಜ್ವರದ ಲಕ್ಷಣಗಳು, ತಡೆಗಟ್ಟುವ ವಿಧಾನಗಳು, ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಜನರ ಜಾಗೃತಿ ಹೆಚ್ಚಿಸುವ ಮಾರ್ಗಗಳ ಬಗ್ಗೆ ಚರ್ಚಿಸಲಾಯಿತು. ಗ್ರಾಮಸ್ಥರಲ್ಲಿ ಜ್ವರದ ಬಗ್ಗೆ ಜಾಗೃತಿ ಬೆಳೆಸುವುದು, ಸುರಕ್ಷಿತ ನೀರಿನ ಉಪಯೋಗ, ಮತ್ತು ನೈರ್ಮಲ್ಯ ಕಾಪಾಡುವುದು ಮುಖ್ಯ ಎಂದು ತಿಳಿಸಲಾಯಿತು.

ಸಂಘವು, ಬಾವಿ ಮತ್ತು ಇತರ ನೀರಿನ ಸಂಗ್ರಹಣಾ ಸ್ಥಳಗಳಲ್ಲಿ, ಮನೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರಿನ ಸಂಚಯವನ್ನು ತಡೆಗಟ್ಟಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮಾಹಿತಿ ನೀಡಿತು. ಡೆಂಗಿ ಹುಟ್ಟುವ ಪರಿಸರವನ್ನು ತಡೆಯಲು ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಆರೋಗ್ಯ ಸಿಬ್ಬಂದಿ ಸಕ್ರಿಯವಾಗಿ ಕೆಲಸ ಮಾಡುವುದಾಗಿ ಸಭೆಯಲ್ಲಿ ತಿಳಿಸಲಾಯಿತು.

ಇನ್ನು ಶಾಲೆಗಳಲ್ಲಿ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಡೆಂಗಿ ಬಗ್ಗೆ ಮಾಹಿತಿ ನೀಡುವುದು, ಹಳೆಯ ಟೈರು, ಪ್ಲಾಸ್ಟಿಕ್, ಮತ್ತು ಇತರ ಬಗೆ ಬಗೆಯ ಬಾಟಲಿಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳುವುದು ಮುಂತಾದ ಕ್ರಮಗಳನ್ನು ಜಾರಿ ಮಾಡುವುದಾಗಿ ಪ್ರತಿಜ್ಞೆ ಮಾಡಲಾಯಿತು.

ಸಭೆಯ ಕೊನೆಯಲ್ಲಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಪಿಡಿಒ ಗ್ರಾಮದಲ್ಲಿ ಡೆಂಗಿ ತಡೆಗೆ ಎಲ್ಲರೂ ಸಹಕಾರ ನೀಡಬೇಕು ಎಂಬ ಆಶಯ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.