ಕನಕಗಿರಿ: ಇಲ್ಲಿನ ಶ್ರೀ ಮಾತಂಗ ಮಹರ್ಷಿ ಹಾಗೂ ಶಿವಶರಣ ಶ್ರೀ ಮಾದರ ಚನ್ನಯ್ಯ ಜಯಂತೋತ್ಸವದ ನಿಮಿತ್ತ ತಾಲ್ಲೂಕು ಮಾತಂಗ ಮಹರ್ಷಿ ಸೇವಾ ಸಮಿತಿ ವತಿಯಿಂದ ಮಾ. 17 ರಂದು ಸಾಮೂಹಿಕ ವಿವಾಹ ಆಯೋಜಿಸಲಾಗಿದೆ ಎಂದು ಸಮಿತಿ ತಾಲ್ಲೂಕು ಅಧ್ಯಕ್ಷ ನಿಂಗಪ್ಪ ಪೂಜಾರ ತಿಳಿಸಿದ್ದಾರೆ.
ಇಲ್ಲಿನ ಕನಕಾಚಲಪತಿ ದೇವಸ್ಥಾನದಲ್ಲಿ ವಿವಾಹ ನಡೆಯಲಿದ್ದು ಜನಪ್ರತಿನಿಧಿಗಳು, ಮುಖಂಡರು ಹಾಗೂ ವಿವಿಧ ಮಠಾಧೀಶರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.