ADVERTISEMENT

ಕೊಪ್ಪಳ: ರಾಮ ಮಂದಿರದಲ್ಲಿ ಮುಸ್ಲಿಮರಿಂದ ಪೂಜೆ

​ಪ್ರಜಾವಾಣಿ ವಾರ್ತೆ
Published 22 ಜನವರಿ 2024, 6:14 IST
Last Updated 22 ಜನವರಿ 2024, 6:14 IST
   

ಕೊಪ್ಪಳ: ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನಡೆಯಲಿರುವ ಹಿನ್ನೆಲೆಯಲ್ಲಿ‌ ಇಲ್ಲಿನ ಭಾಗ್ಯನಗರದ ಮುಸ್ಲಿಂ‌ ಸಮುದಾಯದವರು ಭಾವೈಕ್ಯ ‌ಮೆರೆದಿದ್ದಾರೆ.

ರಾಮಮಂದಿರ ಹಾಗೂ ಆಂಜನೇಯ ದೇವಾಲಯದಲ್ಲಿ ಮುಸ್ಲಿಂ ಸಮುದಾಯದ ಪಂಚ‌ ಕಮಿಟಿ ಸದಸ್ಯರು ಸೋಮವಾರ ಪೂಜೆ ಸಲ್ಲಿಸಿದರು.

ಪಂಚಕಮಿಟಿ ಸದಸ್ಯರು ಒಂದೂವರೆ ಸಾವಿರ ಹಿಂದೂ ಭಕ್ತಾದಿಗಳಿಗೆ ಅನ್ನ, ಸಾರು, ಬದನೇಕಾಯಿ ಪಲ್ಲೆ, ಗೋಧಿ ಹುಗ್ಗಿ ವ್ಯವಸ್ಥೆ ಮಾಡಿದ್ದಾರೆ. ದೇವಸ್ಥಾನಗಳಲ್ಲಿ ಹಿಂದೂ ಹಾಗೂ ಮುಸ್ಲಿಂ ಭಕ್ತರು ಜೊತೆಯಾಗಿ ಪೂಜೆ ಸಲ್ಲಿಸಿದರು. ಮುಸ್ಲಿಮರು ಹಿಂದೂ ಜನರಿಗೆ ಶುಭಾಶಯ ಕೋರಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.