ತಾವರಗೇರಾ: ಸ್ಥಳೀಯ ವರದಿಗಾರ ವಿ.ಆರ್.ತಾಳಿಕೋಟಿ ಅವರಿಗೆ ಪತ್ರಕರ್ತರ ವೇದಿಕೆ ನೀಡುವ ಪಾಟೀಲ ಪುಟ್ಟಪ್ಪ ಸ್ಮಾರಕ ಮಾಧ್ಯಮ ಪ್ರಶಸ್ತಿ ಲಭಿಸಿದೆ.
ಬೆಂಗಳೂರಿನ ರವಿಂದ್ರ ಕಲಾಮಂದಿರದಲ್ಲಿ ಪತ್ರಕರ್ತರ ವೇದಿಕೆ, ನ್ಯೂಸ್ ಸೆಂಟರ್ ಬೆಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೇತ್ರತ್ವದಲ್ಲಿ ಭಾನುವಾರ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವದು ಎಂದು ಪತ್ರಕರ್ತರ ವೇದಿಕೆ ರಾಜ್ಯಾಧ್ಯಕ್ಷ ಮಹೇಶಬಾಬು ಸುರ್ವೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.