ಕೊಪ್ಪಳ: ಯೋಜನಾ ನಿರಾಶ್ರಿತ ಪ್ರಮಾಣ ಪತ್ರ ನೀಡಲು ಲಂಚ ಪಡೆದುಕೊಳ್ಳುತ್ತಿದ್ದಾಗ ಇಲ್ಲಿನ ತಹಶೀಲ್ದಾರ್ ಕಚೇರಿಯ ಶಿರಸ್ತೇದಾರ್ ಸುನಿಲ್ ಕುಮಾರ್ ಕುಲಕರ್ಣಿ ಗುರುವಾರ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದಿದ್ದಾರೆ.
ಒಟ್ಟು ₹50 ಸಾವಿರಕ್ಕೆ ಬೇಡಿಕೆಯಿಟ್ಟಿದ್ದ ಶಿರಸ್ತೇದಾರ್, ₹34 ಸಾವಿರ ಲಂಚ ಪಡೆದುಕೊಳ್ಳುವಾಗ ಸಿಲುಕಿಬಿದ್ದಿದ್ದಾರೆ. ತಾಲ್ಲೂಕಿನ ಗಬ್ಬೂರು ಗ್ರಾಮದ ನಿವಾಸಿ ಕರಿಯಪ್ಪ ಅವರಿಂದ ಹಣ ಪಡೆಯುವಾಗ ಅಧಿಕಾರಿಗಳು ಬಲೆ ಬೀಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.