ADVERTISEMENT

ಕೊಪ್ಪಳ | ಟ್ರ್ಯಾಕ್ಟರ್‌ ಟ್ರಾಲಿ ಪಲ್ಟಿ: 33 ಜನರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2024, 15:09 IST
Last Updated 12 ಅಕ್ಟೋಬರ್ 2024, 15:09 IST
   

ಕಾರಟಗಿ (ಕೊಪ್ಪಳ ಜಿಲ್ಲೆ): ಶರನ್ನವರಾತ್ರಿ ನಿಮಿತ್ತ ದೇವಿಯ ದರ್ಶನ ಮುಗಿಸಿಕೊಂಡು ವಾಪಸ್ ಆಗುತ್ತಿದ್ದಾಗ ಟ್ರ್ಯಾಕ್ಟರ್‌ ಎಂಜಿನ್‌ನಿಂದ ಟ್ರಾಲಿ ಬೇರ್ಪಟ್ಟು ಪಲ್ಟಿಯಾಗಿ 33 ಜನ ಗಾಯಗೊಂಡಿರುವ ಘಟನೆ ಶನಿವಾರ ಸಮೀಪದ ದೇವಿಕ್ಯಾಂಪ್‌ನ ದೇವಿಗುಡ್ಡದಲ್ಲಿ ಜರುಗಿದೆ.

ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಜಂಭುನಾಥಹಳ್ಳಿ, ಹನುಮಾಪುರ ಗ್ರಾಮದ ಮಹಿಳೆಯರು, ಮಕ್ಕಳು ಸಹಿತ 33 ಜನ ದೇವಿಕ್ಯಾಂಪ್‌ನ ಬೀರೇಶ್ವರ ದೇವಿ ದರ್ಶನಕ್ಕೆ ಬಂದಿದ್ದರು. ದರ್ಶನ ಮುಗಿಸಿಕೊಂಡು ಟ್ರ್ಯಾಕ್ಟರ್‌ ಗುಡ್ಡದಿಂದ ಇಳಿಯುವಾಗ ಅವಘಡ ಸಂಭವಿಸಿದೆ. ಟ್ರಾಲಿ ಅಡಿ ಸಿಲುಕಿದ್ದ ಮಹಿಳೆಯರನ್ನು ಅಧಿಕಾರಿಗಳು ಹಾಗೂ ಜನ ರಕ್ಷಿಸಿದರು.

ಮೂವರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿ ಗಂಗಾವತಿಗೆ ಕಳುಹಿಸಲಾಗಿದೆ. ಗಾಯಗೊಂಡ ಎಲ್ಲರಿಗೂ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿದ್ದು, ಬಹುತೇಕರು ಮನೆಗೆ ತೆರಳಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.