ADVERTISEMENT

ತುಂಗಭದ್ರಾ: ಗೇಟ್ ಅಳವಡಿಕೆಯ ಮೊದಲ ಎಲಿಮೆಂಟ್‌ ಯಶಸ್ವಿ; ಸಿಹಿ ಹಂಚಿ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2024, 15:55 IST
Last Updated 16 ಆಗಸ್ಟ್ 2024, 15:55 IST
   

ಕೊಪ್ಪಳ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್‌ ಮರು ಅಳವಡಿಕೆ ಕಾರ್ಯದ ಮೊದಲ ಎಲಿಮೆಂಟ್‌ ಶುಕ್ರವಾರ ಯಶಸ್ಸು ಕಂಡಿದ್ದರಿಂದ ಜನಪ್ರತಿನಿಧಿಗಳು ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.

ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಸಂಸದ ರಾಜಶೇಖರ ಹಿಟ್ನಾಳ, ಕಾಡಾ ಅಧ್ಯಕ್ಷ ಹಸನಸಾಬ್‌ ದೋಟಿಹಾಳ, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಸೇರಿದಂತೆ ಅನೇಕರು ಸಿಹಿ ಹಂಚಿಕೊಂಡು ಖುಷಿಪಟ್ಟರು. ಎಲ್ಲರೂ ಸೇರಿ ಜಲಾಶಯಗಳ ಗೇಟ್‌ ಮತ್ತು ಸುರಕ್ಷತಾ ತಜ್ಞ ಕನ್ನಯ್ಯನಾಯ್ಡು ಅವರಿಗೆ ಕೈ ಕುಲಕಿ ಅಭಿನಂದನೆ ಸಲ್ಲಿಸಿದರು.

‘ತಾಂತ್ರಿಕ ತಂಡದ ನಿರಂತರ ಪರಿಶ್ರಮದಿಂದ ಗೇಟ್ ಅಳವಡಿಕೆ ಯಶಸ್ಸು ಕಂಡಿದ್ದು, ತಂಡದ ಸಂಘಟಿತ ಕಾರ್ಯ ಮಾದರಿಯಾಗಿದೆ. ಉಳಿದ ಇನ್ನು ನಾಲ್ಕು ಎಲಿಮೆಂಟ್‌ಗಳನ್ನು ಶನಿವಾರದ ಹೊತ್ತಿಗೆ ಅಳವಡಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.