ಕುಷ್ಟಗಿ: ಬೈಕ್ ಮಗುಚಿ ಮೃತಪಟ್ಟಿದ್ದ ತಾಲ್ಲೂಕಿನ ಯರಿಗೋನಾಳ ಗ್ರಾಮದ ನಿವಾಸಿ ಸಿಆರ್ಪಿಎಫ್ ಯೋಧ ಸುರೇಶ ವಜ್ರದ (33) ಅವರ ಅಂತ್ಯಕ್ರಿಯೆ ಶುಕ್ರವಾರ ಗ್ರಾಮದ ಹೊರವಲಯದಲ್ಲಿ ನಡೆಯಿತು.
ಬದಾಮಿ ತಾಲ್ಲೂಕಿನ ಕರಡಿಗುಡ್ಡ ಸೀಮಾಂತರದಲ್ಲಿ ಗುರುವಾರ ರಾತ್ರಿ ನಡೆದ ಘಟನೆಯಲ್ಲಿ ಮೃತಪಟ್ಟಿದ್ದು.
ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಇದ್ದಾರೆ.
ಶಾಸಕ ದೊಡ್ಡನಗೌಡ ಪಾಟೀಲ, ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಸೇರಿದಂತೆ ಇತರೆ ಅಧಿಕಾರಿಗಳು, ಮಾಜಿ ಸೈನಿಕರು ಯೋಧನ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಿದರು.
2012ರಲ್ಲಿ ಸೇವೆಗೆ ಸೇರಿದ ಸುರೇಶ್ ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿದ್ದರು. ಹೈದರಾಬಾದ್ನ ಜಿಡಿ–2 ಬೆಟಲಾಲಿಯನ್ದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ರಜೆಯ ಮೇಲೆ ಗ್ರಾಮಕ್ಕೆ ಬಂದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.