ADVERTISEMENT

ನದಿಯಿಂದ ನೀರು: ಗಡ್ಡೆಗಳಿಗೆ ಸಂಪರ್ಕ ಕಡಿತ

​ಪ್ರಜಾವಾಣಿ ವಾರ್ತೆ
Published 25 ಜುಲೈ 2024, 12:20 IST
Last Updated 25 ಜುಲೈ 2024, 12:20 IST
   

ಗಂಗಾವತಿ (ಕೊಪ್ಪಳ ಜಿಲ್ಲೆ): ತುಂಗಭದ್ರಾ ಜಲಾಶಯದಿಂದ ಗುರುವಾರ 28 ಗೇಟ್‌ಗಳ ಮೂಲಕ ನದಿಗೆ ನೀರು ಹರಿಸಲಾಗಿದ್ದು, ತಾಲ್ಲೂಕಿನ ವಿರೂಪಾಪುರ ಗಡ್ಡೆ ಮತ್ತು ನವವೃಂದಾವನ ಗಡ್ಡೆಗೆ ಸಂಪರ್ಕ ಕಡಿತವಾಗಿದೆ.

ಆನೆಗೊಂದಿ ಗ್ರಾಮದ ಬಳಿ ನದಿಯಲ್ಲಿರುವ ಕೃಷ್ಣದೇವರಾಯರ ಸಮಾಧಿಯ 64 ಸಾಲಿನ ಮಂಟಪ ಅರ್ಧದಷ್ಟು ಮುಳುಗಡೆಯಾಗಿದೆ.

ಆದ್ದರಿಂದ ತಾಲ್ಲೂಕು ಆಡಳಿತ ನದಿಪಾತ್ರಕ್ಕೆ ಜನರಿಗೆ ನದಿ ಪ್ರದೇಶಕ್ಕೆ ತೆರಳಬಾರದು ಎಂದು ಕಟ್ಟೆಚ್ಚರ ನೀಡಿದ್ದು, ಪೊಲೀಸ್‌ ಬಂದೋಬಸ್ತ್‌ ಮಾಡಿದೆ. ಆದರೂ ಯುವಕರು ಅಪಾಯ ಲೆಕ್ಕಸದೇ ಸೆಲ್ಫಿ ತೆಗೆದುಕೊಳ್ಳುವಲ್ಲಿ ತಲ್ಲೀನರಾಗಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.