ಗಂಗಾವತಿ (ಕೊಪ್ಪಳ ಜಿಲ್ಲೆ): ನಗರದ ರೈಲ್ವೆ ಟ್ರ್ಯಾಕ್ ಮೇಲೆ ಮದ್ಯಸೇವನೆ ಮಾಡಿ ಮಲಗಿದ್ದ ಮೂವರು ಯುವಕರ ಮೇಲೆ ರೈಲು ಸಂಚರಿಸಿದ ಪರಿಣಾಮ ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದಾರೆ.
ಗುರುವಾರ ರಾತ್ರಿ ಹತ್ತು ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಗಂಗಾವತಿಯ ಚಿಕ್ಕ ಜಂತಕಲ್ ನ ಮೌನೇಶ ಪತ್ತಾರ (23), ಸುನೀಲ (23) ಹಾಗೂ ವೆಂಕಟ ಭೀಮನಾಯ್ಕ (20) ಮೃತಪಟ್ಟವರು.
ಯುವಕರು ರೈಲ್ವೆ ಹಳಿ ಮೇಲೆ ಮದ್ಯಸೇವನೆ ಮಾಡಿ, ಅಮಲಿನಲ್ಲಿ ಹಳಿ ಮೇಲೆ ಮಲಗಿದ್ದರು. ಇದೇ ಸಮಯಕ್ಕೆ ಹುಬ್ಬಳ್ಳಿಯಿಂದ ಸಿಂಧನೂರಿಗೆ ತೆರಳುವ ರೈಲು ಯುವಕರ ಮೇಲೆ ಹರಿದು ಹೋಗಿದೆ. ರೈಲು ಹರಿಸ ರಭಸಕ್ಕೆ ಮೃತದೇಹಗಳು ಹಳಿಯ ಮೇಲೆಯೇ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.
ಈ ಬಗ್ಗೆ ಗದಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.