ಮಂಡ್ಯ: ಕಾರಿನಲ್ಲಿದ್ದವರಿಗೆ ಚಾಕುವಿನಿಂದ ಬೆದರಿಸಿದ ದುಷ್ಕರ್ಮಿಗಳು 16 ಗ್ರಾಂ ತೂಕದ ಚಿನ್ನದ ಸರ, ಮೊಬೈಲ್ ಫೋನ್, ಉಮಾ ಗೋಲ್ಡ್ ಸರ ಹಾಗೂ ₹100 ದೋಚಿರುವ ಘಟನೆ ಹಳೇಬೂದನೂರು ಗ್ರಾಮದ ಹೆದ್ದಾರಿಯ ಬಳಿ ಭಾನುವಾರ ನಸುಕಿನಲ್ಲಿ ನಡೆದಿದೆ.
ತುಮಕೂರಿನ ರೋಹಿತ, ಆತನ ಸಹೋದರ ಹಾಗೂ ಕುಟುಂಬದವರು ಸೇರಿ ಒಟ್ಟು 7 ಮಂದಿ ಮೈಸೂರು ದಸರಾ ಮುಗಿಸಿಕೊಂಡು ಊರಿಗೆ ವಾಪಸ್ ಹೋಗುತ್ತಿದ್ದಾಗ ವಿಶ್ರಾಂತಿ ಪಡೆಯಲು ಸರ್ವೀಸ್ ರಸ್ತೆಯಲ್ಲಿ ವಾಹನ ನಿಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಅಲ್ಲಿಗೆ ಬಂದ ದುಷ್ಕರ್ಮಿಗಳು ಬೆದರಿಸಿ ದೋಚಿದ್ದಾರೆ.
ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.