ADVERTISEMENT

ಕಿಕ್ಕೇರಿ | ಕುಡಿದ ಅಮಲಿನಲ್ಲಿ ಮಾರಣಾಂತಿಕ ಹಲ್ಲೆ: ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 13 ಜುಲೈ 2024, 14:24 IST
Last Updated 13 ಜುಲೈ 2024, 14:24 IST
<div class="paragraphs"><p>ಬಂಧನ (ಸಾಂದರ್ಭಿಕ ಚಿತ್ರ)</p></div>

ಬಂಧನ (ಸಾಂದರ್ಭಿಕ ಚಿತ್ರ)

   

ಕಿಕ್ಕೇರಿ: ಸಮೀಪದ ಹರಿಯಾಲದಮ್ಮ ಗುಡಿ ಸಮೀಪ ಕುಂದೂರು ಗ್ರಾಮದ ಬಳಿ ಬೈಕ್ ಸವಾರರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಗಳನ್ನು ಕಿಕ್ಕೇರಿ ಪೊಲೀಸರು ಬಂಧಿಸಿದ್ದಾರೆ.

ದೊಡ್ಡಸೋಮನಹಳ್ಳಿ ಗ್ರಾಮದ ಕುಮಾರ್ ಹಾಗೂ ಈತನ ಭಾವಮೈದ ಬೋರಲಿಂಗಯ್ಯ ಹಲ್ಲೆಗೊಳಗಾದವರು. ಸಮೀಪದ ಅಣೆಚಾಕನಹಳ್ಳಿ ಗ್ರಾಮದ ಸುದೀಪ, ಗಂಗನಹಳ್ಳಿ ಗ್ರಾಮದ ನಾಗರಾಜು, ಕುಂದೂರು ಗ್ರಾಮದ ಲಕ್ಷ್ಮಣ ಹಲ್ಲೆ ಮಾಡಿದವರು. ಮೂವರು ಸ್ನೇಹಿತರಾಗಿದ್ದಾರೆ.

ADVERTISEMENT

ವಾರದ ಹಿಂದೆ ಕುಮಾರ್ ಹಾಗೂ ಬೋರಲಿಂಗಯ್ಯ ಅವರಿಗೆ ಸಂಬಂಧಿ ನಂದೀಶ ಹರಿಯಾಲದಮ್ಮ ಗುಡಿ ಬಳಿ ಬರಲು ತಿಳಿಸಿದ್ದು, ರಾತ್ರಿ ವೇಳೆ ಬೈಕ್‌ನಲ್ಲಿ ದೊಡ್ಡಸೋಮನಹಳ್ಳಿ ಗ್ರಾಮದಿಂದ ತೆರಳುತ್ತಿದ್ದರು. ಈ ವೇಳೆ ಮಾರ್ಗಮಧ್ಯದ ಕುಂದೂರು ರಸ್ತೆ ಬಳಿ ಮದ್ಯಪಾನ ಮಾಡುತ್ತಿದ್ದ ಮೂವರು ವ್ಯಕ್ತಿಗಳು ಬೈಕ್ ಸವಾರರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು.

ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇನ್‌ಸ್ಪೆಕ್ಟರ್‌ ರೇವತಿ ಅವರು ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸಿಬ್ಬಂದಿ ವಿನೋದ್, ಕುಮಾರ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.