ADVERTISEMENT

ಕ್ಷಮೆ ಕೇಳಿ, ರೈತರ ಬಿಡುಗಡೆಗೊಳಿಸಿ: ಮದ್ದೂರಿನಲ್ಲಿ ರೈತ ಸಂಘದಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2024, 14:10 IST
Last Updated 17 ಫೆಬ್ರುವರಿ 2024, 14:10 IST
ದೆಹಲಿಯಲ್ಲಿ ರೈತರ ಬಂಧನ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಮದ್ದೂರಿನಲ್ಲಿ ರೈತ ಸಂಘದ ಕಾರ್ಯಕರ್ತರು ತಾಲ್ಲೂಕು ಕಚೇರಿ ಮುಂದೆ ಶನಿವಾರ ಪ್ರತಿಭಟನೆ ನಡೆಸಿದರು
ದೆಹಲಿಯಲ್ಲಿ ರೈತರ ಬಂಧನ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಮದ್ದೂರಿನಲ್ಲಿ ರೈತ ಸಂಘದ ಕಾರ್ಯಕರ್ತರು ತಾಲ್ಲೂಕು ಕಚೇರಿ ಮುಂದೆ ಶನಿವಾರ ಪ್ರತಿಭಟನೆ ನಡೆಸಿದರು   

ಮದ್ದೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಬಂಧನ ಮಾಡಿರುವುದನ್ನು ಖಂಡಿಸಿ ಹಾಗೂ ಕೇಂದ್ರ ಸರ್ಕಾರದ ನಡೆ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಶನಿವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ರೈತ ಮುಖಂಡ ಸೊ. ಸಿ ಪ್ರಕಾಶ್ ಮಾತನಾಡಿ, ಕೇಂದ್ರ ಸರ್ಕಾರವು ರೈತರ ಹಿತ ಕಾಯುವುದರ ಬದಲು ರೈತರನ್ನು ಬಂಧಿಸಿರುವುದು ಖಂಡನೀಯ’ ಎಂದರು.

ರೈತ ಸಂಘದ ಹಿರಿಯ ಮುಖಂಡ ಕೀಳಘಟ್ಟ ನಂಜುಂಡಯ್ಯ ಮಾತನಾಡಿ,‘ರೈತರನ್ನು ತಡೆದು ಅವರನ್ನು ಬಂಧಿಸಿರುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಕೇಂದ್ರ ಸರ್ಕಾರ ರೈತರ ಕ್ಷಮೆ ಕೇಳಿ, ಬಂಧಿಸಿದ ರೈತರನ್ನು ಕೂಡಲೇ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡ ಅಣ್ಣೂರು ಮಹೇಂದ್ರ ಅವರು ಮಾತನಾಡಿ, ‘ರಾಜ್ಯದ ರೈತರಿಗೆ ತಕ್ಷಣ ಕೇಂದ್ರ ಮತ್ತು ರಾಜ್ಯ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಬೇಕು. ರೈತರು ಮಾಡಿರುವ ಎಲ್ಲಾ ಕೃಷಿ ಸಾಲ, ಬ್ಯಾಂಕ್, ಸಹಕಾರ ಸಂಘ ಸಾಲಗಳನ್ನು ಮನ್ನಾ ಮಾಡಬೇಕು. ಗುಣಮಟ್ಟದ ವಿದ್ಯುತ್‌ ಪೂರೈಸಬೇಕು. ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಮೇವು ಬ್ಯಾಂಕ್ ಸ್ಥಾಪಿಸಬೇಕು’ ಎಂದು ಆಗ್ರಹಿಸಿದರು.

ತಹಶೀಲ್ದಾರ್ ಸೋಮಶೇಖರ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ರೈತ ಸಂಘದ ಮುಖಂಡರಾದ ಪಣ್ಣೆದೊಡ್ಡಿ ವೆಂಕಟೇಶ, ರಮೇಶ, ಕೆ.ಎಸ್. ಪುಟ್ಟಸ್ವಾಮಿ, ಬಿ.ಎಂ. ದೇವರಾಜು, ಬಿ. ರಾಜು, ಉಮೇಶ, ಚನ್ನಪ್ಪ, ಕೃಷ್ಣ, ಹನುಮಂತಯ್ಯ, ಲಿಂಗರಾಜು, ಎಂ.ಸಿ. ರಾಜೇಶ, ಲಿಂಗೇಗೌಡ, ಕೆ.ಎಸ್. ರಾಮಲಿಂಗೇಗೌಡ, ಕೆ.ಟಿ. ಚಂದ್ರಶೇಖರ್, ಮಹದೇವಸ್ವಾಮಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.