ಮಳವಳ್ಳಿ: ತಾಲ್ಲೂಕಿನ ಮಾರ್ಕಾಲು ಗೇಟ್ ಬಳಿ ಸೋಮವಾರ ಮಧ್ಯಾಹ್ನ ಬೈಕ್ಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಕೊದೇನಕೊಪ್ಪಲುವಿನ ಮಾದೇಗೌಡ(63) ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಹಿಂಬದಿ ಸವಾರನಿಗೆ ತೀವ್ರ ಗಾಯವಾಗಿದೆ.
ಮಾದೇಗೌಡ ತಮ್ಮ ಬೈಕ್ ನಲ್ಲಿ ಬಸವೇಗೌಡ ಅವರ ಗ್ರಾಮದಿಂದ ಮಳವಳ್ಳಿಗೆ ಬರುತ್ತಿದ್ದ ವೇಳೆ ಮೈಸೂರು-ಮಳವಳ್ಳಿ ರಾಜ್ಯ ಹೆದ್ದಾರಿಯ ಮಾರ್ಕಾಲು ಗೇಟ್ ಬಳಿ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮಾದೇಗೌಡರ ದೇಹ ಛಿದ್ರವಾಗಿದೆ. ಹಿಂಬದಿಯ ಸವಾರ ಬಸವೇಗೌಡ ತೀವ್ರವಾಗಿ ಗಾಯಗೊಂಡಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾನವೀಯತೆ ಮೆರೆದ ಸಿಪಿಐ: ಘಟನೆಯಲ್ಲಿ ಗಾಯಗೊಂಡಿದ್ದ ಹಿಂಬದಿ ಸವಾರ ಬಸವೇಗೌಡ ತೀವ್ರ ರಕ್ತಸ್ರಾವದಿಂದ 20 ನಿಮಿಷಗಳ ಕಾಲ ನರಳುತ್ತಿದ್ದ ಸಂದರ್ಭದಲ್ಲಿ ಜನರು ನೋಡತ್ತಾ ನಿಂತಿದ್ದರೂ ಯಾರೊಬ್ಬರು ಸಹಾಯಕ್ಕೆ ಬರಲಿಲ್ಲ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಹಲಗೂರು ಸಿಪಿಐ ಬಿ.ಎಸ್.ಶ್ರೀಧರ್ ಹಾಗೂ ಕಿರುಗಾವಲು ಪಿಎಸ್ಐ ಡಿ.ರವಿಕುಮಾರ್ ತಮ್ಮ ಕಾರಿನಲ್ಲಿಯೇ ಗಾಯಾಳು ಬಸವೇಗೌಡ ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನಿವೀಯತೆ ಮೆರೆದಿದ್ದಾರೆ.
ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.