ADVERTISEMENT

ಹಲಗೂರು: ಮನೆ ಬಾಗಿಲು ಮುರಿದು ಕಳ್ಳತನ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2024, 15:23 IST
Last Updated 1 ಅಕ್ಟೋಬರ್ 2024, 15:23 IST
ಹಲಗೂರು ಸಮೀಪದ ಬೆನಮನಹಳ್ಳಿಯಲ್ಲಿ ಕಳ್ಳತನವಾದ ಮನೆಗೆ ಡಿವೈಎಸ್ಪಿ ಕೃಷ್ಣಪ್ಪ, ಸರ್ಕಲ್ ಇನ್ಸ್‌ಪೆಕ್ಟರ್ ಬಿ.ಎಸ್.ಶ್ರೀಧರ್ ಮತ್ತು ಪಿಎಸ್ಐ ಮಹೇಂದ್ರ ಭೇಟಿ ನೀಡಿ ಮಾಲೀಕ ರವಿ ಅವರಿಂದ ಮಾಹಿತಿ ಪಡೆದರು
ಹಲಗೂರು ಸಮೀಪದ ಬೆನಮನಹಳ್ಳಿಯಲ್ಲಿ ಕಳ್ಳತನವಾದ ಮನೆಗೆ ಡಿವೈಎಸ್ಪಿ ಕೃಷ್ಣಪ್ಪ, ಸರ್ಕಲ್ ಇನ್ಸ್‌ಪೆಕ್ಟರ್ ಬಿ.ಎಸ್.ಶ್ರೀಧರ್ ಮತ್ತು ಪಿಎಸ್ಐ ಮಹೇಂದ್ರ ಭೇಟಿ ನೀಡಿ ಮಾಲೀಕ ರವಿ ಅವರಿಂದ ಮಾಹಿತಿ ಪಡೆದರು   

ಹಲಗೂರು: ಸಮೀಪದ ಬೆನಮನಹಳ್ಳಿಯಲ್ಲಿ ಮಂಗಳವಾರ ಮಧ್ಯಾಹ್ನ ಮನೆಯ ಬಾಗಿಲು ಬೀಗ ಒಡೆದ ಕಳ್ಳರು, ಮನೆಯಲ್ಲಿದ್ದ ಚಿನ್ನ, ಬೆಳ್ಳಿ ಮತ್ತು ನಗದು ದೋಚಿಕೊಂಡು ಪರಾರಿಯಾಗಿದ್ದಾರೆ.

ಮನೆ ಮಾಲೀಕ ರವಿ ಅವರ ಪತ್ನಿ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದು, ಶಾಲೆಗೆ ತೆರಳಿದ್ದರು. ಮಾಲೀಕ ರವಿ ಸಂಬಂಧಿಕರ ತಿಥಿ ಕಾರ್ಯದಲ್ಲಿ ಭಾಗವಹಿಸಲು ಇಗ್ಗಲೂರಿಗೆ ತೆರಳಿದ್ದರು. ಮಧ್ಯಾಹ್ನ ಮನೆಗೆ ಬಂದಾಗ ಬಾಗಿಲು ಒಡೆದಿರುವುದು ಗೊತ್ತಾಯಿತು.

ಬೆನಮನಹಳ್ಳಿ ಮತ್ತು ಕರಡಹಳ್ಳಿ ನಡುವಿನ ಹೊರ ವಲಯದಲ್ಲಿರುವ ಒಂಟಿ ಮನೆಗೆ ನುಗ್ಗಿದ ಕಳ್ಳರು, ಬೀರುವಿನಲ್ಲಿದ್ದ ಸುಮಾರು 131 ಗ್ರಾಂ ಚಿನ್ನಾಭರಣ, 81 ಗ್ರಾಂ ಬೆಳ್ಳಿ ಪದಾರ್ಥ ಮತ್ತು ₹1.32 ಲಕ್ಷ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ಮನೆಯ ಮಾಲೀಕ ರವಿ ದೂರು ನೀಡಿದಾರೆ.

ADVERTISEMENT

ಸ್ಥಳಕ್ಕೆ ಮಳವಳ್ಳಿ ವಿಭಾಗದ ಡಿವೈಎಸ್ಪಿ ವಿ.ಕೃಷ್ಣಪ್ಪ, ಹಲಗೂರು ಸರ್ಕಲ್ ಇನ್ಸ್‌ಪೆಕ್ಟರ್ ಬಿ.ಎಸ್. ಶ್ರೀಧರ್ ಮತ್ತು ಪಿಎಸ್ಐ ಬಿ.ಮಹೇಂದ್ರ ಭೇಟಿ ನೀಡಿ ಮಾಹಿತಿ ಪಡೆದರು. ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಆಗಮಿಸಿ ತಪಾಸಣೆ ನಡೆಸಿದರು.

ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.