ADVERTISEMENT

ಸ್ಟಾರ್ ಚಂದ್ರು ಪರ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಮತಯಾಚನೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2024, 13:17 IST
Last Updated 11 ಏಪ್ರಿಲ್ 2024, 13:17 IST
ಬೆಳಕವಾಡಿ ಸಮೀಪದ ಹೊಸಹಳ್ಳಿ ಗ್ರಾಮದಲ್ಲಿ ಲೋಕಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಪರ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಮತಯಾಚನೆ ಮಾಡಿದರು. ವೆಂಕಟರಮಣೇಗೌಡ(ಸ್ಟಾರ್ ಚಂದ್ರು), ಬಿ.ಎಸ್.ಶಿವಣ್ಣ ಇದ್ದಾರೆ.
ಬೆಳಕವಾಡಿ ಸಮೀಪದ ಹೊಸಹಳ್ಳಿ ಗ್ರಾಮದಲ್ಲಿ ಲೋಕಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಪರ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಮತಯಾಚನೆ ಮಾಡಿದರು. ವೆಂಕಟರಮಣೇಗೌಡ(ಸ್ಟಾರ್ ಚಂದ್ರು), ಬಿ.ಎಸ್.ಶಿವಣ್ಣ ಇದ್ದಾರೆ.   

ಬೆಳಕವಾಡಿ: ಬಡವರ ಪರ ಕಾರ್ಯಕ್ರಮ ಕೊಟ್ಟಂಥ ಕಾಂಗ್ರೆಸ್ ಸರ್ಕಾರ ಬೇಕಾ, ಇಲ್ಲ ಅವುಗಳನ್ನು ಟೀಕಿಸುವ ಬಿಜೆಪಿ-ಜೆಡಿಎಸ್ ಬೇಕಾ ಎನ್ನುವುದನ್ನು ಜನರೇ ತೀರ್ಮಾನ ಮಾಡಬೇಕು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಹೇಳಿದರು.

ಮಳವಳ್ಳಿ ತಾಲ್ಲೂಕಿನ ಬೋಪ್ಪೇಗೌಡನಪುರ ಹೋಬಳಿಯ ಪಂಡಿತಹಳ್ಳಿ, ಹೊಸಹಳ್ಳಿ, ಕುಂದೂರು, ಕ್ಯಾತನಹಳ್ಳಿ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಪರ ಮತಯಾಚನೆ ಮಾಡಿ ಅವರು ಮಾತನಾಡಿದರು.

 ಅಭ್ಯರ್ಥಿ ವೆಂಕಟರಮಣೇಗೌಡ ಮಾತನಾಡಿ, ನಿಮ್ಮ ಸೇವೆ ಮಾಡಲು ನನಗೊಂದು ಅವಕಾಶ ಮಾಡಿ ಕೊಡಿ ಎಂದು ಮತಯಾಚನೆ ಮಾಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಶಿವಣ್ಣ, ಬ್ಲಾಕ್ ಕಾಂಗ್ರೆಸ್ರಾದ ಅಧ್ಯಕ್ಷ ದೊಡ್ಡಯ್ಯ, ಸಿ.ಪಿ.ರಾಜು, ಮುಖಂಡರಾದ ಆರ್.ಆರ್.ಪ್ರಕಾಶ್, ರಾಜಣ್ಣ, ನಂಜಪ್ಪ, ಎಂ.ಸತೀಶ್ ಕುಮಾರ್, ಬಸವರಾಜು, ಕಸ್ತೂರಿ ಸಣ್ಣಯ್ಯ, ವೆಂಕಟೇಶ್, ಪರಮೇಶ್, ಅಶ್ವಥ್ ಕುಮಾರ್, ಅಂಬರೀಶ್, ಪಾಟೇಲ್ ಪಾಪಣ್ಣ, ಚಿನ್ನಸ್ವಾಮಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.