ADVERTISEMENT

ಶ್ರೀರಂಗಪಟ್ಟಣ: ಕಂದಾಯ ಇಲಾಖಾ ನೌಕರರ ಸಂಘದ ಅಧ್ಯಕ್ಷರಾಗಿ ಟಿ.ಪಿ. ರೇವಣ್ಣ ಆಯ್ಕೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2023, 14:06 IST
Last Updated 18 ಡಿಸೆಂಬರ್ 2023, 14:06 IST
ಶ್ರೀರಂಗಪಟ್ಟಣ ತಾಲ್ಲೂಕು ಕಂದಾಯ ಇಲಾಖಾ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಸೋಮವಾರ ಅವಿರೋಧವಾಗಿ ಆಯ್ಕೆಯಾದ ಟಿ.ಪಿ. ರೇವಣ್ಣ ಅವರನ್ನು ಸಂಘದ ಪದಾಧಿಕಾರಿಗಳು ಮತ್ತು ಸಿಬ್ಬಂದಿ ಅಭಿನಂದಿಸಿದರು
ಶ್ರೀರಂಗಪಟ್ಟಣ ತಾಲ್ಲೂಕು ಕಂದಾಯ ಇಲಾಖಾ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಸೋಮವಾರ ಅವಿರೋಧವಾಗಿ ಆಯ್ಕೆಯಾದ ಟಿ.ಪಿ. ರೇವಣ್ಣ ಅವರನ್ನು ಸಂಘದ ಪದಾಧಿಕಾರಿಗಳು ಮತ್ತು ಸಿಬ್ಬಂದಿ ಅಭಿನಂದಿಸಿದರು   

ಶ್ರೀರಂಗಪಟ್ಟಣ: ಕಂದಾಯ ಇಲಾಖಾ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಕಸಬಾ ಹೋಬಳಿ ವ್ಯಾಪ್ತಿಯ ಕಂದಾಯ ನಿರೀಕ್ಷಕ ಟಿ.ಪಿ. ರೇವಣ್ಣ ಸೋಮವಾರ ಅವಿರೋಧವಾಗಿ ಆಯ್ಕೆಯಾದರು.

ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ, ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ. ತಮ್ಮಣ್ಣಗೌಡ ಮತ್ತು ಪ್ರಧಾನ ಕಾರ್ಯದರ್ಶಿ ಎ.ಎನ್‌. ಭಾಸ್ಕರ್‌ ಅವರ ಮ್ಮುಖದಲ್ಲಿ ಟಿ.ಪಿ. ರೇವಣ್ಣ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಸಂಘದ ಗೌರವಾಧ್ಯಕ್ಷರಾಗಿ ಕೆ. ದಿನೇಶಕುಮಾರ್‌, ಕಾರ್ಯದರ್ಶಿಯಾಗಿ ಸಿದ್ದ ಮಹೇಶ್ವರ ಪ್ರಶಾಂತ್‌, ಉಪಾಧ್ಯಕ್ಷರಾಗಿ ನವೀನ್‌, ಜಿಲ್ಲಾ ಪ್ರತಿನಿಧಿಯಾಗಿ ಎಚ್. ಮಂಜುನಾಥ್‌ ಮತ್ತು ನಿರ್ದೇಶಕರಾಗಿ ಜಯಂತ್‌, ಮಹೇಂದ್ರ, ಲಾವಣ್ಯ, ಉಮೇಶ್‌, ರೇವತಿ ಆಯ್ಕೆಯಾದರು.

ಕಂದಾಯ ಇಲಾಖಾ ನೌಕರರ ಸಂಘದ ಸದಸ್ಯರ ಹಿತಕ್ಕಾಗಿ, ಅವರ ನಿರೀಕ್ಷೆಯಂತೆ ಕೆಲಸ ಮಾಡುತ್ತೇನೆ ಎಂದು ನೂತನ ಅಧ್ಯಕ್ಷ ಟಿ.ಪಿ. ರೇವಣ್ಣ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.