ADVERTISEMENT

ಮೈಸೂರು |'ಜವಾಬ್ದಾರಿ ಕಡ್ಡಾಯವಾಗಿ ನಿರ್ವಹಿಸಿ'

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2024, 7:50 IST
Last Updated 9 ಏಪ್ರಿಲ್ 2024, 7:50 IST
ಜೆಎಸ್ಎಸ್ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾದರು
ಜೆಎಸ್ಎಸ್ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾದರು   

ಮೈಸೂರು: ‘ಮತದಾನವು ಪ್ರತಿ ಪ್ರಜೆಯ ಅತಿ ಮುಖ್ಯವಾದ ಜವಾಬ್ದಾರಿಯಾಗಿದ್ದು, ಅದನ್ನು ಎಲ್ಲರೂ ಕಡ್ಡಾಯವಾಗಿ ಪಾಲನೆ ಮಾಡಬೇಕು’ ಎಂದು ಜೆಎಸ್ಎಸ್ ಕಾಲೇಜಿನ ಪ್ರಾಂಶುಪಾಲ ಎಸ್.ನಟರಾಜು ತಿಳಿಸಿದರು.

ಇಲ್ಲಿನ ಜೆಎಸ್ಎಸ್ ಕಾನೂನು ಕಾಲೇಜಿನ ಎನ್ಎಸ್ಎಸ್ ಘಟಕ ಹಾಗೂ ಸಂವಿಧಾನ ವಿಭಾಗದಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಜೆಗಳು ಮತ್ತು ಸಂವಿಧಾನ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ’ ಎಂದರು.

ADVERTISEMENT

ವಿದ್ಯಾರ್ಥಿಗಳು ಸಿದ್ಧಗಂಗಾ ವೃತ್ತದವರೆಗೆ ಘೋಷಣೆ ಕೂಗುತ್ತಾ ಬಂದು ಮತದಾನ ಪ್ರತಿಜ್ಞಾವಿಧಿ ಸ್ವೀಕರಿಸಿದರು.

ವಿಭಾಗದ ಮುಖ್ಯಸ್ಥ ಎಸ್. ನಾಗೇಂದ್ರ, ಎನ್ಎಸ್‌ಎಸ್‌ ಘಟಕದ ಎಸ್. ಸುರೇಶ್ ಕುಮಾರ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.