ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆ ಜಂಕ್ಷನ್ನ ವರ್ತುಲ ರಸ್ತೆಯ ಬಳಿ ಕಾರಿನಲ್ಲಿ ಎರಡು ಬ್ಯಾಗ್ ಗಾಂಜಾ ಇಟ್ಟುಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಬಂಧಿಸಿರುವ ಸೈಬರ್ ಠಾಣಾ ಪೊಲೀಸರು, ₹6.30 ಲಕ್ಷ ಮೌಲ್ಯದ 21 ಕೆ.ಜಿ ಗಾಂಜಾ, ಕಾರು ಹಾಗೂ ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ.
ಮಂಡ್ಯ ಜಿಲ್ಲೆಯ ಪಾಂಡವಪುರದ ನಿವಾಸಿಗಳಾದ ಅರುಣ್ಕುಮಾರ್, ಶ್ರೇಯಸ್ ಹಾಗೂ ಶಿವಪುರದ ಪ್ರವೀಣ್ ಬಂಧಿತರು. ಆರೋಪಿಗಳು ಒಡಿಶಾದಿಂದ ಗಾಂಜಾ ತಂದು ಮಾರಾಟ ಮಾಡುತ್ತಿರುವುದು ವಿಚಾರಣೆಯಲ್ಲಿ ಗೊತ್ತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.