ADVERTISEMENT

ಚನ್ನಪಟ್ಟಣ: ನಿಖಿಲ್‌ ಕಣಕ್ಕಿಳಿಸಬೇಕೆಂಬ ಒತ್ತಾಯವಿದೆ– ಮಹೇಶ್

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2024, 13:45 IST
Last Updated 14 ಆಗಸ್ಟ್ 2024, 13:45 IST
ಸಾ.ರಾ.ಮಹೇಶ್
ಸಾ.ರಾ.ಮಹೇಶ್   

ಮೈಸೂರು: ‘ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ–ಜೆಡಿಎಸ್‌ ಮೈತ್ರಿಪಕ್ಷಗಳ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು. ಈ ವಿಷಯದಲ್ಲಿ ಯಾವುದೇ ಗೊಂದಲವಿಲ್ಲ’ ಎಂದು ಜೆಡಿಎಸ್‌ ಕಾರ್ಯಾಧ್ಯಕ್ಷ ಸಾ.ರಾ.ಮಹೇಶ್ ಹೇಳಿದರು.

ಇಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ‘ಆ ಕ್ಷೇತ್ರದ ಉಪ ಚುನಾವಣೆ ಸಂಬಂಧ ಅಭ್ಯರ್ಥಿ ಆಯ್ಕೆ ಇನ್ನೂ ಆಗಿಲ್ಲ. ಕ್ಷೇತ್ರವನ್ನು ಎಚ್‌.ಡಿ. ಕುಮಾರಸ್ವಾಮಿ ಪ್ರತಿನಿಧಿಸುತ್ತಿದ್ದರು. ಈಗ ಅವರು ಸಂಸದರಾಗಿ ಗೆದ್ದು ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಅಲ್ಲಿಂದ ಅವರ ಪುತ್ರ, ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್ ಕುವಾರಸ್ವಾಮಿ ಕಣಕ್ಕಿಳಿಸಬೇಕು ಎಂಬ ಒತ್ತಾಯವಿದೆ’ ಎಂದರು.

‘ಇಂದಿನ ಆರ್ಥಿಕ ಪರಿಸ್ಥಿತಿಯನ್ನು ನೋಡಿದರೆ ರಾಜ್ಯ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುವುದು ಅನುಮಾನವಾಗಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿರುವವರೆಗಷ್ಟೆ ಅವು ಮುಂದುವರಿಯಬಹುದು’ ಎಂದು ಮಾರ್ಮಿಕವಾಗಿ ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.