ಮೈಸೂರು: ರಾಜ್ಯದಲ್ಲಿ ಕರ್ನಾಟಕ ರೈತ ಸುರಕ್ಷಾ – ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಸರ್ಕಾರದಿಂದ ಈ ಸಾಲಿನ ಮುಂಗಾರು ಹಂಗಾಮಿನಲ್ಲೂ ಜಾರಿಗೊಳಿಸಲಾಗಿದೆ.
ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 19 ಬೆಳೆಗಳಿಗೆ ರೈತರು ಬೆಳೆ ವಿಮೆ ಮಾಡಿಸಬಹುದಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಬಿ.ಎಸ್. ಚಂದ್ರಶೇಖರ್ ತಿಳಿಸಿದ್ದಾರೆ.
‘ಟಾಟಾ ಏ.ಐ.ಜಿ. ಜನರಲ್ ಇನ್ಸುರೆನ್ಸ್ ಕಂಪನಿ ಲಿಮಿಟೆಡ್’ ಜಿಲ್ಲೆಗೆ ಸರ್ಕಾರದಿಂದ ಆಯ್ಕೆಯಾಗಿರುವ ವಿಮಾ ಸಂಸ್ಥೆಯಾಗಿದೆ. ಹೆಚ್ಚಿನ ಮಾಹಿತಿಗೆ ಹಾಗೂ ನೋಂದಾಯಿಸಲು ರೈತರು ಸಮೀಪದ ರೈತ ಸಂಪರ್ಕ ಕೇಂದ್ರ, ಬ್ಯಾಂಕ್ ಅಥವಾ ನಾಗರಿಕ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು’ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.