ADVERTISEMENT

ಬಿಜೆಪಿಯಲ್ಲಿ ಸಿದ್ದರಾಮಯ್ಯ ಮೋರ್ಚಾ ಸೃಷ್ಟಿ: ಎಚ್‌.ವಿಶ್ವನಾಥ್‌

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2024, 0:51 IST
Last Updated 1 ಅಕ್ಟೋಬರ್ 2024, 0:51 IST
ಎಚ್‌.ವಿಶ್ವನಾಥ್‌
ಎಚ್‌.ವಿಶ್ವನಾಥ್‌   

ಮೈಸೂರು: ‘ಬಿಜೆಪಿಯಲ್ಲಿ ಸಿದ್ದರಾಮಯ್ಯ ಮೋರ್ಚಾ ಆರಂಭವಾಗಿದೆ. ಬಸನಗೌಡ ಪಾಟೀಲ ಯತ್ನಾಳ, ಪ್ರತಾಪ ಸಿಂಹ, ರಮೇಶ್‌ ಜಾರಕಿಹೊಳಿ ಮುಖ್ಯಮಂತ್ರಿಯ ಪರವಾಗಿ ಮಾತನಾಡುತ್ತಿದ್ದು, ಒಂದು ಪಕ್ಷದ ನಾಯಕರೆಂದು ಕರೆದುಕೊಳ್ಳುವ ಅವರಿಗೆ ನಾಚಿಕೆಯಾಗಬೇಕು’ ಎಂದು ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಅಭಿಪ್ರಾಯಪಟ್ಟರು.

‘ಮುಡಾ ನಿವೇಶನ ಹಂಚಿಕೆ ಪ್ರಕರಣದಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸುವ ಪ್ರಯತ್ನ ನಡೆಯುತ್ತಿದೆ. ಅದಕ್ಕಾಗಿ ಮಹಿಷ ದಸರಾ ಕುರಿತು ಮಾತನಾಡು ತ್ತಿದ್ದಾರೆ’ ಎಂದು ಸೋಮವಾರ ಇಲ್ಲಿ ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT