ADVERTISEMENT

ಮಳೆಯಿಂದ ಕುಸಿದು ಬಿದ್ದ ಮನೆಯ ಗೋಡೆ: ಮಗುವನ್ನು ಪಾರು ಮಾಡಿ ಮೃತಪಟ್ಟ ತಾಯಿ

​ಪ್ರಜಾವಾಣಿ ವಾರ್ತೆ
Published 19 ಜುಲೈ 2024, 12:49 IST
Last Updated 19 ಜುಲೈ 2024, 12:49 IST
   

ಪಿರಿಯಾಪಟ್ಟಣ: ತಾಲೂಕಿನ ಕಕ್ಕುಂಡಿ ಗ್ರಾಮದಲ್ಲಿ ಶುಕ್ರವಾರ ಮಳೆಯಿಂದಾಗಿ ಮನೆಯ ಮಣ್ಣಿನ ಗೋಡೆ ಕುಸಿದು ಬೀಳುತ್ತಿದ್ದ ವೇಳೆ ಎರಡು ವರ್ಷದ ಮಗುವನ್ನು ಪ್ರಾಣಾಪಾಯದಿಂದ ಪಾರು ಮಾಡಿ ಮೃತಪಟ್ಟರು.

ತಾಲ್ಲೂಕು ಕಚೇರಿ ಗ್ರಾಮ ಸೇವಕ ಶಿವರಾಜು ಅವರ ಪತ್ನಿ ಹೇಮಲತಾ(22) ಮೃತರು.

ಅವರು ಮನೆಯ ಹೊರಗಿದ್ದ ಶೌಚಾಲಯಕ್ಕೆ ಹೋಗಿ ಬರುವಾಗ ಗೋಡೆ ಕುಸಿಯುತ್ತಿರುವುದನ್ನು ಗಮನಿಸಿದ್ದಾರೆ. ಆಗ, ಜತೆಗಿದ್ದ ಮಗುವನ್ನು ದೂರಕ್ಕೆ ತಳ್ಳಿದ್ದಾರೆ. ಇದರಿಂದ ಮಗು (ಕೃಷಾಂತ್) ಪ್ರಾಣಾಪಾಯದಿಂದ ಪಾರಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.