ADVERTISEMENT

ಮೈಸೂರು: ಕಬಿನಿ ಸೂಪರಿಂಟೆಂಡೆಂಟ್ ಎಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ

​ಪ್ರಜಾವಾಣಿ ವಾರ್ತೆ
Published 11 ಜುಲೈ 2024, 4:18 IST
Last Updated 11 ಜುಲೈ 2024, 4:18 IST
<div class="paragraphs"><p>ಕಬಿನಿ ಜಲಾಶಯದ ಸೂಪರಿಂಟೆಂಡೆಂಟ್ ಎಂಜಿನಿಯರ್ ಕೆ  ಮಹೇಶ್ ಮನೆಯಲ್ಲಿ ಲೋಕಾಯುಕ್ತ ಕಾರ್ಯಾಚರಣೆ. ಪ್ರಜಾವಾಣಿ&nbsp;ಚಿತ್ರ.</p><p></p></div>

ಕಬಿನಿ ಜಲಾಶಯದ ಸೂಪರಿಂಟೆಂಡೆಂಟ್ ಎಂಜಿನಿಯರ್ ಕೆ ಮಹೇಶ್ ಮನೆಯಲ್ಲಿ ಲೋಕಾಯುಕ್ತ ಕಾರ್ಯಾಚರಣೆ. ಪ್ರಜಾವಾಣಿ ಚಿತ್ರ.

   

ಮೈಸೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪದ ಮೇರೆಗೆ ಕಬಿನಿ ಜಲಾಶಯದ ಸೂಪರಿಂಟೆಂಡೆಂಟ್ ಎಂಜಿನಿಯರ್ ಕೆ.ಮಹೇಶ್ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.

ADVERTISEMENT

ಇಲ್ಲಿನ ಚಾಮುಂಡಿ ಬೆಟ್ಟದ ರಸ್ತೆಯ ಕೆಂಪಚಲುವಮ್ಮಣ್ಣಿ ನಗರದ ಮನೆಯಲ್ಲಿ‌ನ ಆಸ್ತಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಲೋಕಾಯುಕ್ತ ಪ್ರಭಾರ ಎಸ್ ಪಿ ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕೃಷ್ಣಯ್ಯ, ಇನ್ ಸ್ಪೆಕ್ಟರ್ ಗಳಾದ ಜಯರತ್ನ, ಲೋಕೇಶ್, ರವಿಕುಮಾರ್, ಸಿಬ್ಬಂದಿ

ವೀರಭದ್ರ ಸ್ವಾಮಿ, ಪ್ರಕಾಶ್, ಗೋಪಿ, ತ್ರಿವೇಣಿ, ಮೋಹನ್ ಗೌಡ, ಮೋಹನ್ ಕುಮಾರ್, ದಿನೇಶ್, ಸುಂದ್ರೇಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.