ADVERTISEMENT

ಮೈಸೂರು: ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಕೆ.ಸಾಲುಂಡಿ ಗ್ರಾಮದ ನಿವಾಸಿ ಕನಕರಾಜು (22) ಮಂಗಳವಾರ ಮೃತಪಟ್ಟರು.

​ಪ್ರಜಾವಾಣಿ ವಾರ್ತೆ
Published 21 ಮೇ 2024, 9:11 IST
Last Updated 21 ಮೇ 2024, 9:11 IST
<div class="paragraphs"><p>ಕನಕರಾಜು</p></div>

ಕನಕರಾಜು

   

ಮೈಸೂರು: ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಕೆ.ಸಾಲುಂಡಿ ಗ್ರಾಮದ ನಿವಾಸಿ ಕನಕರಾಜು (22) ಮಂಗಳವಾರ ಮೃತಪಟ್ಟರು.

ತೀವ್ರ ವಾಂತಿ, ಭೇದಿಯಿಂದಾಗಿ ಅವರು ಸೋಮವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಗೆ ತೆರಳಿದ್ದು, ಔಷಧಿ ಪಡೆದು ಮರಳಿದ್ದರು. ಸಂಜೆಯ ವೇಳೆಗೆ ಮತ್ತಷ್ಟು ಸಮಸ್ಯೆಯಾದಾಗ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಮೂಲಗಳು ತಿಳಿಸಿವೆ.

ADVERTISEMENT

'ಅತಿಯಾದ ಭೇದಿಯಿಂದಾಗಿ ಆಸ್ಪತ್ರ ಸೇರಿದ್ದ 47 ಜನ ಚೇತರಿಸಿಕೊಂಡಿದ್ದಾರೆ. ನೇರವಾಗಿ ಖಾಸಗಿ ಆಸ್ಪತ್ರೆ ಸೇರಿದವರೊಬ್ಬರು ಮೃತಪಟ್ಟಿದ್ದಾರೆ. ಕುಡಿಯುವ ನೀರಿನಲ್ಲಿ ಮಲಿನ ಸೇರಿದ ಕಾರಣ ಘಟನೆ ನಡೆದಿದೆ' ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕುಮಾರಸ್ವಾಮಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಅಧಿಕಾರಿಗಳಿಗೆ ಕರೆಮಾಡಿ ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.