ಮೈಸೂರು: ನಗರದ ಚೆಲುವಾಂಬ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ವಿದ್ಯಾಧರೆ (42) ಲಕ್ಷ್ಮೀಪುರಂನ ಅಪಾರ್ಟ್ಮೆಂಟ್ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.
ಪತಿ ಕೆ.ಆರ್.ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಷಣ್ಮುಖ ಹಾಗೂ ಮೂವರು ಮಕ್ಕಳೊಂದಿಗೆ ವಾಸವಿದ್ದರು.
‘ಕೆಲಸ ಮುಗಿಸಿಕೊಂಡು ಶನಿವಾರ ರಾತ್ರಿ ಮನೆಗೆ ಬಂದ ವಿದ್ಯಾಧರೆ, ಮಕ್ಕಳೊಂದಿಗೆ ಕೋಣೆಯಲ್ಲಿ ಮಲಗಿದ್ದಾರೆ. ಭಾನುವಾರ ಬೆಳಿಗ್ಗೆ 9 ಗಂಟೆಗೆ ಹೊರ ಬಾರದ್ದರಿಂದ ಅನುಮಾನಗೊಂಡು ಡಾ.ಷಣ್ಮುಖ ಅವರು ಹೋಗಿ ಪರೀಕ್ಷಿಸಿದ್ದು, ಮೃತಪಟ್ಟಿರುವುದು ಗೊತ್ತಾಗಿದೆ. ಅವರ ಸಾವಿನ ಬಗ್ಗೆ ಅನುಮಾನವಿದೆ’ ಎಂದು ಮೃತರ ಸಹೋದರ ಶ್ರೀಕಾಂತ್ ದೂರು ನೀಡಿದ್ದಾರೆ.
ಬೆರಳಚ್ಚು ತಂಡದೊಂದಿಗೆ ವಿಧಿ ವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.