ADVERTISEMENT

Mysuru Dasara|ಮುಹೂರ್ತ ಮೀರಿ ಪುಷ್ಪಾರ್ಚನೆ: ಸರ್ಕಾರ-ರಾಜಮನೆತನದ ನಡುವೆ ತಿಕ್ಕಾಟ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2024, 16:26 IST
Last Updated 12 ಅಕ್ಟೋಬರ್ 2024, 16:26 IST
<div class="paragraphs"><p>ಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿಯನ್ನು ಹೊತ್ತ ಅಭಿಮನ್ಯು ಆನೆ ಗಜಗಾಂಭೀರ್ಯದಿಂದ ಹೆಜ್ಜೆ ಹಾಕಿದ ದೃಶ್ಯ ಶನಿವಾರ ಆಲ್ಬರ್ಟ್ ವಿಕ್ಟರ್ ರಸ್ತೆಯಲ್ಲಿ ಕ್ಯಾಮೆರಾ ಕಣ್ಣಿಗೆ ಸೆರೆಯಾಯಿತು </p></div>

ಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿಯನ್ನು ಹೊತ್ತ ಅಭಿಮನ್ಯು ಆನೆ ಗಜಗಾಂಭೀರ್ಯದಿಂದ ಹೆಜ್ಜೆ ಹಾಕಿದ ದೃಶ್ಯ ಶನಿವಾರ ಆಲ್ಬರ್ಟ್ ವಿಕ್ಟರ್ ರಸ್ತೆಯಲ್ಲಿ ಕ್ಯಾಮೆರಾ ಕಣ್ಣಿಗೆ ಸೆರೆಯಾಯಿತು

   

- ಪ್ರಜಾವಾಣಿ ಚಿತ್ರ/ಅನೂಪ್ ರಾಘ.ಟಿ.

ಮೈಸೂರು: ವಿಜಯದಶಮಿ ಮೆರವಣಿಗೆಯಲ್ಲಿ ಅಂಬಾರಿಗೆ ಪುಷ್ಪಾರ್ಚನೆಯು ಮುಹೂರ್ತ ಮೀರಿದ ಬಳಿಕ ಅಂದರೆ ಅರ್ಧ ತಾಸು ತಡವಾಗಿ ನಡೆದಿದ್ದಕ್ಕೆ ಅಂಬಾರಿಯನ್ನು ಸಿದ್ಧಪಡಿಸುವಲ್ಲಿ ಆದ ವಿಳಂಬವೇ ಕಾರಣ ಎಂದು ಹೇಳಲಾಗುತ್ತಿದೆ.

ADVERTISEMENT

ಮುಹೂರ್ತದ ಪ್ರಕಾರ, 4ರಿಂದ 4.30ರೊಳಗೆ ವಿಜಯದಶಮಿ ಮೆರವಣಿಗೆಯನ್ನು ಮುಖ್ಯಮಂತ್ರಿ ಉದ್ಘಾಟಿಸಬೇಕಿತ್ತು. ಆದರೆ, ಅದು ನಡೆದಾಗ 5 ಗಂಟೆ 2 ನಿಮಿಷ ಆಗಿತ್ತು. ಇದಕ್ಕೆ, ರಾಜವಂಶಸ್ಥರಿಂದ ಅಂಬಾರಿಯು ವಿಳಂಬವಾಗಿ ದೊರೆತಿದ್ದು ಕಾರಣ ಎಂದು ಹೇಳಲಾಗುತ್ತಿದೆ.

ಅಂಬಾರಿಯು ರಾಜವಂಶಸ್ಥರ ಸುಪರ್ದಿಯಲ್ಲಿರುತ್ತದೆ. ಅದನ್ನು ಸಾಮಾನ್ಯವಾಗಿ ವಿಜಯದಶಮಿ ಮೆರವಣಿಗೆಯ ಮುಹೂರ್ತಕ್ಕೆ ಒಂದು ತಾಸು ಮುಂಚಿತವಾಗಿ ಕೊಡಲಾಗುತ್ತದೆ. ಆದರೆ, ಈ ಬಾರಿ ತಡವಾಯಿತು. ಸರ್ಕಾರ ಹಾಗೂ ಅರಮನೆಯ ನಡುವಿನ ಜಟಾಪಟಿಯೇ ಇದಕ್ಕೆ ಕಾರಣ ಎನ್ನಲಾಗತ್ತಿದೆ. 

ಅಂಬಾರಿ ದೊರೆಯುವುದು ವಿಳಂಬವಾದ ವಿಷಯ ತಿಳಿದ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಹಾಗೂ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್‌ ವೇದಿಕೆ ಬಳಿಯಿಂದ ಅಂಬಾರಿ ಕಟ್ಟುವ ಸ್ಥಳಕ್ಕೆ ತೆರಳಿದ್ದರು.

ತಡವಾದ್ದರಿಂದ, ತರಾತುರಿಯಲ್ಲಿ ಅಂಬಾರಿಯನ್ನು ಕಟ್ಟಲಾಯಿತು ಎಂದು ತಿಳಿದುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.