ADVERTISEMENT

ಮೈಸೂರು | ಡೆಂಗಿ ಜ್ವರ; ಸಮುದಾಯ ಆರೋಗ್ಯಾಧಿಕಾರಿ ಸಾವು

​ಪ್ರಜಾವಾಣಿ ವಾರ್ತೆ
Published 2 ಜುಲೈ 2024, 20:05 IST
Last Updated 2 ಜುಲೈ 2024, 20:05 IST
ನಾಗೇಂದ್ರ
ನಾಗೇಂದ್ರ   

ಹುಣಸೂರು (ಮೈಸೂರು ಜಿಲ್ಲೆ): ಡೆಂಗಿ ಜ್ವರದಿಂದ ಬಳಲುತ್ತಿದ್ದ ತಾಲ್ಲೂಕಿನ ಗುರುಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯಾಧಿಕಾರಿ ನಾಗೇಂದ್ರ (28) ಮಂಗಳವಾರ ಮೈಸೂರಿನ ಆಸ್ಪತ್ರೆಯಲ್ಲಿ ನಿಧನರಾದರು.

‘ಚಾಮರಾಜನಗರ ಜಿಲ್ಲೆಯ ನಂಜನಗೂಡು ತಾಲ್ಲೂಕಿನವರಾದ ಅವರು, ಮೈಸೂರಿನಲ್ಲಿ ಶುಶ್ರೂಷಕಿಯಾಗಿರುವ ಜ್ಯೋತಿ ಅವರೊಂದಿಗೆ 8 ತಿಂಗಳ ಹಿಂದೆ ವಿವಾಹವಾಗಿದ್ದರು. ಮೈಸೂರಿನಲ್ಲೇ ವಾಸವಿದ್ದರು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕೀರ್ತಿಕುಮಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT