ಕಿಕ್ಕೇರಿ: ಹೋಬಳಿಯ ಸುತ್ತಮುತ್ತ ಕಳೆದ ನಾಲ್ಕೈದು ದಿನಗಳಿಂದ ವಿರಾಮ ನೀಡುತ್ತ ಸುರಿಯುತ್ತಿರುವ ಮಳೆಗೆ ರೈತರ ಮೊಗದಲ್ಲಿ ಹರ್ಷ ಮೂಡಿದೆ.
ಭಾನುವಾರ ಬೆಳಿಗ್ಗೆ ಹಾಗೂ ಸಂಜೆ ಅರ್ಧಗಂಟೆಗೂ ಹೆಚ್ಚು ಕಾಳ ಮಳೆ ಸುರಿಯಿತು. ಪಟ್ಟಣದ ಪ್ರವಾಸಿ ಮಂದಿರದ ಬಳಿ ರಾಜ್ಯ ಹೆದ್ದಾರಿಯಲ್ಲಿ ನೀರು ನಿಂತು ಪಾದಚಾರಿ, ದ್ವಿಚಕ್ರ ವಾಹನ ಸವಾರರು ಕಷ್ಟಪಟ್ಟರು.
ಮಂದಗೆರೆ ರಸ್ತೆಯ ಹೊಸ ಬಡಾವಣೆಯಲ್ಲಿರುವ ಧೃವ ಎಲೆಕ್ಟ್ರಾನಿಕ್ಸ್ ಮನೆ ಬಳಿ ರಸ್ತೆಯಲ್ಲಿ ಭಾರಿ ಪ್ರಮಾಣದಲ್ಲಿ ನೀರು ಸಂಗ್ರಹಣೆಯಾಗಿ ವಾಹನ ಸವಾರರು ಓಡಾಡಲು ಸಾಧ್ಯವಾಗದೆ ಪರದಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.