ತಿ. ನರಸೀಪುರ: ಕಾರ್ತಿಕ ಮಾಸದ ಅಂಗವಾಗಿ ತಾಲ್ಲೂಕಿನ ಮಾದಾಪುರ ಸಮೀಪದ ಮುರುಡೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಭಾನುವಾರ ಕೃತಿಕಾ ನಕ್ಷತ್ರದಲ್ಲಿ ಶಿವ ದೀಪೋತ್ಸವ ವಿಜೃಂಭಣೆಯಿಂದ ನಡೆಯಲಿದೆ.
ಬೆಳಿಗ್ಗೆ 6 ಗಂಟೆಯಿಂದ ದೇವರಿಗೆ ರುದ್ರಾಭಿಷೇಕ, ರುದ್ರ ಪಾರಾಯಣ, ಸಹಸ್ರನಾಮ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಹಾಗೂ ಸಂಜೆ 6 ಗಂಟೆಗೆ ವಿವಿಧ ಪೂಜೆ, ಹೋಮ, ದೀಪ ಪೂಜೆ ಹಾಗೂ ಕೃತಿಕೋತ್ಸವ ನಂತರ ಉತ್ಸವ ನಡೆಯುತ್ತದೆ. ನಂತರ ಪ್ರಸಾದ ವಿನಿಯೋಗ ಇರುತ್ತದೆ ಎಂದು ದೇವಸ್ಥಾನದ ಅರ್ಚಕ ಎಸ್. ಉಮೇಶ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.