ADVERTISEMENT

ಸಿದ್ದರಾಮಯ್ಯ ನನ್ನ ಮನೆದೇವರು, ಅವರಿಗೆ ದ್ರೋಹ ಮಾಡಿಲ್ಲ: ಮುಡಾ ಅಧ್ಯಕ್ಷ ಮರೀಗೌಡ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2024, 7:58 IST
Last Updated 30 ಸೆಪ್ಟೆಂಬರ್ 2024, 7:58 IST
ಸಿದ್ದರಾಮಯ್ಯ
ಸಿದ್ದರಾಮಯ್ಯ    

ಮೈಸೂರು: ಸಿದ್ದರಾಮಯ್ಯ ನನ್ನ ಮನೆದೇವರು. ಎಂದಿಗೂ ಅವರು ಹಾಗೂ ಅವರ ಕುಟುಂಬಕ್ಕೆ ದ್ರೋಹ ಬಗೆಯುವ ಕೆಲಸ ಮಾಡುವುದಿಲ್ಲ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ಮರೀಗೌಡ ಸ್ಪಷ್ಟನೆ ನೀಡಿದರು.

' ಸಿದ್ದರಾಮಯ್ಯರ ಇಂದಿನ ಸ್ಥಿತಿಗೆ ನಾನೇ ಕಾರಣ ಎಂದು ಆರೋಪಿಸಿ ಕಾಂಗ್ರೆಸ್ ನ ಕೆಲ ಕಾರ್ಯಕರ್ತರು ಕಳೆದ ಶುಕ್ರವಾರ ಮೈಸೂರು ವಿಮಾನ ನಿಲ್ದಾಣದಲ್ಲಿ ನನ್ನ ಮೇಲೆ ಹಲ್ಲೆಗೆ ಯತ್ನಿಸಿದರು. ಸ್ವಪಕ್ಷೀಯರ ಈ ಗಲಾಟೆ ತೀವ್ರ ನೋವು ತಂದಿದೆ' ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು.

' 50:50 ನಿವೇಶನಗಳ ಹಂಚಿಕೆ ಆಗಿರುವುದು 2020ರಿಂದ. ನಾನು ಮುಡಾ ಅಧ್ಯಕ್ಷ ಆಗಿದ್ದು 2024ರ ಮಾರ್ಚ್ 1ರಿಂದ. ಹೀಗಾಗಿ ಹಿಂದಿನ ಪ್ರಕರಣಗಳಿಗೂ ನನಗೂ ಸಂಬಂಧ ಇಲ್ಲ' ಎಂದರು.

ADVERTISEMENT

' ಸದ್ಯಕ್ಕೆ ರಾಜೀನಾಮೆ ಕೊಡುವ ಯೋಚನೆ ಇಲ್ಲ. ಸಿದ್ದರಾಮಯ್ಯ ಅವರೇ ನನ್ನ ಹೈಕಮಾಂಡ್. ಅವರು ಸೂಚಿಸಿದರೆ ರಾಜೀನಾಮೆಗೂ ಸಿದ್ದನಿದ್ದೇನೆ' ಎಂದರು.

' ನಿನ್ನ ಕಾಲದಲ್ಲಿ ಏನು ಆಗಿಲ್ಲ ಬಿಡು ಎಂದು ಸ್ವತಃ ಸಿದ್ದರಾಮಯ್ಯ ಅವರೇ ನನಗೆ ಸಮಾಧಾನ ಮಾಡಿದ್ದಾರೆ‌. ಸ್ವಪಕ್ಷೀಯರು ನನ್ನ ತೇಜೋವಧೆ ಮಾಡುವುದನ್ನು ಇನ್ನಾದರೂ ಬಿಡಬೇಕು. ಸಮುದಾಯದ ಮುಖಂಡರು ನನ್ನ ಮೇಲಿರುವ ತಪ್ಪು ಕಲ್ಪನೆಯನ್ನು ಬಿಡಬೇಕು' ಎಂದು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.