ಬನ್ನೂರು: ಹೋಬಳಿ ಆತ್ತಹಳ್ಳಿಯಲ್ಲಿನ ಆಂಜನೇಯ, ಮಂಟೇಸ್ವಾಮಿ, ಬೀರೇಶ್ವರ ದೇವಾಲಯಗಳಲ್ಲಿ ಹುಂಡಿ ಕಳ್ಳತನವಾದ ಘನೆ ಗುರುವಾರ ಬೆಳಗಿನ ಜಾವ ನಡೆದಿದೆ.
ಹುಂಡಿಯಲ್ಲಿನ ಹಣದೊಂದಿಗೆ, ದೇವರ ಬೆಳ್ಳಿ ಪದಾರ್ಥ ಖದೀಮರು ಕಳವು ಮಾಡಿದ್ದಾರೆ ಎಂದು ದೇವಸ್ಥಾನದ ಪುರೋಹಿತರು ತಿಳಿಸಿದ್ದಾರೆ.
ಈ ಸಂಬಂಧ ಸ್ಥಳಕ್ಕೆ ಬನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಹಳ್ಳಿಗಳಿಗೆ ಪೊಲೀಸರು ಗಸ್ತು ಬರುತ್ತಿಲ್ಲ. ಇದರಿಂದ ಅಪರಾಧ ಪ್ರಕರಣ ಹೆಚ್ಚುತ್ತಿದೆ’ ಎಂದು ಗ್ರಾಮಸ್ಥರು ದೂರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.